ಶ್ರೀನಿವಾಸಪುರ:ತಾಲ್ಲೂಕಿನ ಮುತ್ತಕಪಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಅಕ್ರಮಗಳ ಸರಮಾಲೆ ನಡೆದಿದೆ ಜನ ಓಡಾಡುವ ರಸ್ತೆಗೂ ಖಾತೆ ಮಾಡಿರುವ ಅಲ್ಲಿನ ಅಧಿಕಾರಿಗಳು ಅಕ್ರಮಗಳ ವ್ಯವಹಾರ ಸಾಬಿತು ಪಡಿಸಿದ್ದಾರೆ ಎಂದು ಡಾ..ಬಿ.ಅರ್. ಅಂಬೇಡ್ಕರ್ ಯುವ ವೇದಿಕೆ ಕರ್ನಾಟಕ ಸಂಘಟನೆ ಆರೋಪಿಸಿದೆ. ಮುತ್ತಕಪಲ್ಲಿ ಪಂಚಾಯಿತಿಯಲ್ಲಿ ನಡೆದಿರುವ ಅಕ್ರಮಗಳನ್ನು ತನಿಖೆ ಮಾಡುವಂತೆ ಒತ್ತಾಯಿಸಿ ಶ್ರೀನಿವಾಸಪುರ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಾರ್ಯಲಯದ ಮುಂದೆ ಡಾ..ಬಿ.ಅರ್. ಅಂಬೇಡ್ಕರ್ ಯುವ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಜೈ ಭೀಮ್ ಶ್ರೀನಿವಾಸ್ ನೇತೃತ್ವದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು. ಈ ಸಮಯದಲ್ಲಿ ಮಾತಾನಾಡಿದ ಜೈ ಭೀಮ್ ಶ್ರೀನಿವಾಸ್ ಮಾತನಾಡಿ ಗ್ರಾಮಪಂಚಾಯಿತಿಯಲ್ಲಿ ದೂಡ್ಡಮಟ್ಟದಲ್ಲಿ ಅಕ್ರಮಗಳು ನಡೆದಿದ್ದು ಸಿ.ಸಿ ರಸ್ತೆಗೂ ಇ ಖಾತಾ ಮಾಡಿದ್ದಾರೆ ಅದನ್ನು ರದ್ದು ಗೊಳಿಸುವಂತೆ ಒತ್ತಾಯಿಸಿದರು. ಮುತ್ತಕಪಲ್ಲಿ ಪಂಚಾಯಿತಿಯಲ್ಲಿ ನಡೆದಿರುವ ಅಕ್ರಮಗಳ ತನಿಖೆ ಮಾಡಲು ವಿಶೇಷ ತಂಡ ರಚಿಸಬೇಕು ಹಾಗೂ ಸಿ.ಸಿ ರಸ್ತೆಗೆ ಮಾಡಿರುವ ಇ ಖಾತಾ ರದ್ದು ಗೊಳಿಸಿ ವೆಂಕಟರಾಮಪ್ಪ ಮನೆಗೆ ಹೋಗಲು ರಸ್ತೆ ಅನುಕೂಲ ಮಾಡಬೇಕು ತಾಲೂಕಿನಾದ್ಯಂತ ಆಗಿರುವ ನರೇಗಾ ಕಾಮಗಾರಿಗಳಲ್ಲಿ ಬಾರಿ ಅವ್ಯವಹಾರಗಳು ನಡೆದಿದ್ದು ವಿಶೇಷವಾಗಿ ಪರಿಶೀಲನೆ ಮಾಡಬೇಕು ತಪ್ಪಿತಸ್ಥರನ್ನು ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ತಾಲ್ಲೂಕು ಪಂಚಾಯಿತಿ ಇವೋಗೆ ಮನವಿ ಪತ್ರ ಸಲ್ಲಿಸಿದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



