ಶ್ರೀನಿವಾಸಪುರ:ತಾಲ್ಲೂಕಿನ ಮುತ್ತಕಪಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಅಕ್ರಮಗಳ ಸರಮಾಲೆ ನಡೆದಿದೆ ಜನ ಓಡಾಡುವ ರಸ್ತೆಗೂ ಖಾತೆ ಮಾಡಿರುವ ಅಲ್ಲಿನ ಅಧಿಕಾರಿಗಳು ಅಕ್ರಮಗಳ ವ್ಯವಹಾರ ಸಾಬಿತು ಪಡಿಸಿದ್ದಾರೆ ಎಂದು ಡಾ..ಬಿ.ಅರ್. ಅಂಬೇಡ್ಕರ್ ಯುವ ವೇದಿಕೆ ಕರ್ನಾಟಕ ಸಂಘಟನೆ ಆರೋಪಿಸಿದೆ. ಮುತ್ತಕಪಲ್ಲಿ ಪಂಚಾಯಿತಿಯಲ್ಲಿ ನಡೆದಿರುವ ಅಕ್ರಮಗಳನ್ನು ತನಿಖೆ ಮಾಡುವಂತೆ ಒತ್ತಾಯಿಸಿ ಶ್ರೀನಿವಾಸಪುರ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಾರ್ಯಲಯದ ಮುಂದೆ ಡಾ..ಬಿ.ಅರ್. ಅಂಬೇಡ್ಕರ್ ಯುವ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಜೈ ಭೀಮ್ ಶ್ರೀನಿವಾಸ್ ನೇತೃತ್ವದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು. ಈ ಸಮಯದಲ್ಲಿ ಮಾತಾನಾಡಿದ ಜೈ ಭೀಮ್ ಶ್ರೀನಿವಾಸ್ ಮಾತನಾಡಿ ಗ್ರಾಮಪಂಚಾಯಿತಿಯಲ್ಲಿ ದೂಡ್ಡಮಟ್ಟದಲ್ಲಿ ಅಕ್ರಮಗಳು ನಡೆದಿದ್ದು ಸಿ.ಸಿ ರಸ್ತೆಗೂ ಇ ಖಾತಾ ಮಾಡಿದ್ದಾರೆ ಅದನ್ನು ರದ್ದು ಗೊಳಿಸುವಂತೆ ಒತ್ತಾಯಿಸಿದರು. ಮುತ್ತಕಪಲ್ಲಿ ಪಂಚಾಯಿತಿಯಲ್ಲಿ ನಡೆದಿರುವ ಅಕ್ರಮಗಳ ತನಿಖೆ ಮಾಡಲು ವಿಶೇಷ ತಂಡ ರಚಿಸಬೇಕು ಹಾಗೂ ಸಿ.ಸಿ ರಸ್ತೆಗೆ ಮಾಡಿರುವ ಇ ಖಾತಾ ರದ್ದು ಗೊಳಿಸಿ ವೆಂಕಟರಾಮಪ್ಪ ಮನೆಗೆ ಹೋಗಲು ರಸ್ತೆ ಅನುಕೂಲ ಮಾಡಬೇಕು ತಾಲೂಕಿನಾದ್ಯಂತ ಆಗಿರುವ ನರೇಗಾ ಕಾಮಗಾರಿಗಳಲ್ಲಿ ಬಾರಿ ಅವ್ಯವಹಾರಗಳು ನಡೆದಿದ್ದು ವಿಶೇಷವಾಗಿ ಪರಿಶೀಲನೆ ಮಾಡಬೇಕು ತಪ್ಪಿತಸ್ಥರನ್ನು ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ತಾಲ್ಲೂಕು ಪಂಚಾಯಿತಿ ಇವೋಗೆ ಮನವಿ ಪತ್ರ ಸಲ್ಲಿಸಿದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



