ಶ್ರೀನಿವಾಸಪುರ :ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಸಮಾಜದಲ್ಲಿ ಅದರಲ್ಲೂ ವಿಶೇಷವಾಗಿ ಗ್ರಾಮೀಣ ಜನರ ಬದುಕು ಹಸನಾಗಲು ನಿಸ್ವಾರ್ಥವಾಗಿ ಯೋಜನೆಗಳನ್ನು ಹಮ್ಮಿಕೊಂಡು ಕಾರ್ಯನಿರ್ವಹಿಸುತ್ತಿದೆ ಎಂದು ಮಾದರಿ ರೈತ ಶಂಕರರೆಡ್ಡಿ ಹೇಳಿದರು ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಅಡ್ಡಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಿಮೋರಪಲ್ಲಿಯ ಲಕ್ಕಮ್ಮನಕೆರೆ 2023 – 24 ನೇ ಸಾಲಿನ 669 ನೇ ನಮ್ಮೂರು ನಮ್ಮ ಕೆರೆ ನಾಮಫಲಕ ಅನಾವರಣ ಹಾಗೂ ಕೆರೆ ಹಸ್ತಾಂತರ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
ಧರ್ಮಸ್ಥಳ ಸಂಸ್ಥೆ ಬಡ ಹಾಗು ಮದ್ಯಮವರ್ಗದವರ ಬಗ್ಗೆ ಕಾಳಜಿ ವಹಿಸಿ ಸೇವಾಮನೋಭಾವದಿಂದ ಕೆಲಸ ಮಾಡುತ್ತಿದೆ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಮಾತನಾಡಿ ರಾಜ್ಯದೆಲ್ಲೆಡೆ ಮುಂಗಾರು ಉತ್ತಮವಾಗಿ ಆಗುತ್ತಿದ್ದು ದಕ್ಷಿಣ ಒಳನಾಡು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ ತಕ್ಕ ಮಟ್ಟಿಗೆ ಕೆರೆಗಳು ತುಂಬಿ ಕೃಷಿ ಚಟುವಟಿಕೆಗಳಿಗೆ ನೀರು ಬಳಕೆಯಾಗುತ್ತಿರುವುದು ಉತ್ತಮ ವಾತವರಣ ನಿರ್ಮಾಣ ಆಗಿದೆ ಎಂದರು.
ರಾಜ್ಯದಲ್ಲಿ ಇನ್ನು ಹಲವು ಜಿಲ್ಲೆಗಳಲ್ಲಿ ಮಳೆ ಅಭಾವ ಇದೆ ಜೊತೆಗೆ ಕೆಲ ಜಿಲ್ಲೆಗಳಲ್ಲಿ ಕೆರೆಗಳಲ್ಲಿ ಹೂಳು ತುಂಬಿರುವುದರಿಂದ ನೀರಿಗೆ ಬರ ಇದ್ದು ಕೃಷಿ ಚಟುವಟಿಕೆಗೆ ಸಮಸ್ಯೆಯಾಗಿದೆ ಇದನ್ನು ಅರಿತ ಪೂಜ್ಯ ಡಾಕ್ಟರ್ ಡಿ ವೀರೇಂದ್ರ ಹೆಗ್ಗಡೆಯವರು 2016ರಲ್ಲಿ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮವನ್ನು ಜಾರಿಗೆ ತಂದು ರಾಜ್ಯಾದ್ಯಂತ ಇದುವರೆಗೂ 6105.51 ಕೋಟಿ ಅನುದಾನ ನೀಡಿ 787 ಕೆರೆಗಳನ್ನು ಅಭಿವೃದ್ಧಿಪಡಿಸಿರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಮದ್ದಿರೆಡ್ಡಿ,ಅಶ್ವಥರೆಡ್ಡಿ, ಜಯಮ್ಮ, ಹಾಗೂ ವಲಯದ ಮೇಲ್ವಿಚಾರಕರಾದ ಉಮೇಶ್ ಕೃಷಿ ಮೇಲ್ವಿಚಾರಕರಾದ ರಮೇಶ್ ಸೇವಾ ಪ್ರತಿನಿಧಿ ನಾಗರತ್ನಮ್ಮ ಹಾಗೂ ಪ್ರಗತಿ ಬಂದು ಸ್ವಸಹಾಯ ಸಂಘದ ಸದಸ್ಯರು ಗ್ರಾಮಸ್ಥರು ಇದ್ದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Saturday, April 26