ಶ್ರೀನಿವಾಸಪುರ:ಸಣ್ಣ ಸಣ್ಣ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರಗಳು ಕಾಳಜಿ ವಹಿಸಿ ಅಂತಹ ಸಮುದಾಯಗಳನ್ನು ಮುಖ್ಯವಾಹಿನಿಗೆ ತರಲು ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿದರೆ ಸಮಾಜದಲ್ಲಿ ಮೂಲಭೂತವಾಗಿ ಕಡೆಗಣಿಸಲ್ಪಟ್ಟಿರುವ ಸಣ್ಣ ಸಣ್ಣ ಸಮುದಾಯಗಳ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಇಂದಿರಾಭವನ್ ರಾಜಣ್ಣ ಹೇಳಿದರು.
ಅವರು ಪಟ್ಟಣದ ನಗರೇಶ್ವರ ದೇವಾಯಲದಲ್ಲಿ ಆಯೋದ್ಯ ನಗರದ ಶಿವಚಾರ್ಯ ನಗರ್ತ ವೈಶ್ಯ ಸಂಘದ ಕೇಂದ್ರ ಸಮಿತಿಗೆ ಶ್ರೀನಿವಾಸಪುರ ಕ್ಷೇತ್ರದಿಂದ ನಿರ್ದೇಶಕರಾಗಿ ಆಯ್ಕೆಯಾಗಿರುವ ಬಿ.ಶಿವಕುಮಾರ್ ಅವರನ್ನು ಸನ್ಮಾನಿಸಿ ಮಾತನಾಡಿದರು.
ಸಣ್ಣ ಪುಟ್ಟ ಸಮುದಾಯಗಳ ವೃತ್ತಿಯಾಗಿದ್ದ ಸಣ್ಣ ವ್ಯಾಪಾರ, ವೃತ್ತಿ ಕೌಶಲ್ಯದ ಬದುಕಿಗೆ ಕಾಲದ ಅಣತಿಯ ಜಾಗತಿಕರಣ ಮತ್ತು ಉದಾರಿಕರಣದ ಹೊಡೆತ ಬಿದ್ದಿದೆ ಆ ಸಮುದಾಯಗಳ ಕುಟುಂಬಗಳು ಇನ್ನಿಲ್ಲದ ಸಮಸ್ಯೆಗಳನ್ನು ಅನುಭವಿಸುತ್ತಿವೆ ಇಂತಹ ಸಮುದಾಯಗಳ ಅಭಿವೃದ್ದಿಗೆ ಸರ್ಕಾರಗಳು ವಿಶೇಷ ಕಾಳಜಿ ವಹಿಸಿ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕಾರ್ಯಕ್ರಮಗಳನ್ನು ರೂಪಿಸಬೇಕು ಈ ಬಗ್ಗೆ ಜನಪ್ರತಿನಿಧಿಗಳು ಚುನಾವಣೆ ಸಂದರ್ಭದಲ್ಲಿ ಕೊಡುವಂತ ಅಭಿವೃದ್ಧಿ ಕುರಿತಾದ ವಾಗ್ದಾನಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಶ್ರಮಿಸುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘದ ಮಾಜಿ ನಿರ್ದೇಶಕ ಗೀರಿಶ್, ಮುಖಂಡರಾದ ಕಪಾಲಿಮೋಹನ್,ರಾಜಶೇಖರ್,ಕಪಾಲಿಮಂಜು,ರಾಮಲಿಂಗಪ್ಪ,ಮಂಜುನಾಥ್, ಮಾಡಿ ವೀರಣ್ಣಮಂಜು,ನಗರ್ತ ಮಹಿಳಾ ಸಂಘದ ಮುಖಂಡರಾದ ಅಮುದಾ,ಅನಿತಾ ಆಯೋಧ್ಯ ನಗರದ ನಾಮಧಾರಿ ಸಂಘದ ಸಂಚಾಲಕ ಪಾಳ್ಯಶ್ರೀನಿವಾಸಶೆಟ್ಟಿ,ಪುಟ್ಟರಾಜು,ನಂಬಿಹಳ್ಳಿ ರಮೇಶ್,ಗುರುಮೂರ್ತಿ, ಮುಂತಾದವರು ಇದ್ದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



