ಶ್ರೀನಿವಾಸಪುರ:ಸಣ್ಣ ಸಣ್ಣ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರಗಳು ಕಾಳಜಿ ವಹಿಸಿ ಅಂತಹ ಸಮುದಾಯಗಳನ್ನು ಮುಖ್ಯವಾಹಿನಿಗೆ ತರಲು ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿದರೆ ಸಮಾಜದಲ್ಲಿ ಮೂಲಭೂತವಾಗಿ ಕಡೆಗಣಿಸಲ್ಪಟ್ಟಿರುವ ಸಣ್ಣ ಸಣ್ಣ ಸಮುದಾಯಗಳ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಇಂದಿರಾಭವನ್ ರಾಜಣ್ಣ ಹೇಳಿದರು.
ಅವರು ಪಟ್ಟಣದ ನಗರೇಶ್ವರ ದೇವಾಯಲದಲ್ಲಿ ಆಯೋದ್ಯ ನಗರದ ಶಿವಚಾರ್ಯ ನಗರ್ತ ವೈಶ್ಯ ಸಂಘದ ಕೇಂದ್ರ ಸಮಿತಿಗೆ ಶ್ರೀನಿವಾಸಪುರ ಕ್ಷೇತ್ರದಿಂದ ನಿರ್ದೇಶಕರಾಗಿ ಆಯ್ಕೆಯಾಗಿರುವ ಬಿ.ಶಿವಕುಮಾರ್ ಅವರನ್ನು ಸನ್ಮಾನಿಸಿ ಮಾತನಾಡಿದರು.
ಸಣ್ಣ ಪುಟ್ಟ ಸಮುದಾಯಗಳ ವೃತ್ತಿಯಾಗಿದ್ದ ಸಣ್ಣ ವ್ಯಾಪಾರ, ವೃತ್ತಿ ಕೌಶಲ್ಯದ ಬದುಕಿಗೆ ಕಾಲದ ಅಣತಿಯ ಜಾಗತಿಕರಣ ಮತ್ತು ಉದಾರಿಕರಣದ ಹೊಡೆತ ಬಿದ್ದಿದೆ ಆ ಸಮುದಾಯಗಳ ಕುಟುಂಬಗಳು ಇನ್ನಿಲ್ಲದ ಸಮಸ್ಯೆಗಳನ್ನು ಅನುಭವಿಸುತ್ತಿವೆ ಇಂತಹ ಸಮುದಾಯಗಳ ಅಭಿವೃದ್ದಿಗೆ ಸರ್ಕಾರಗಳು ವಿಶೇಷ ಕಾಳಜಿ ವಹಿಸಿ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕಾರ್ಯಕ್ರಮಗಳನ್ನು ರೂಪಿಸಬೇಕು ಈ ಬಗ್ಗೆ ಜನಪ್ರತಿನಿಧಿಗಳು ಚುನಾವಣೆ ಸಂದರ್ಭದಲ್ಲಿ ಕೊಡುವಂತ ಅಭಿವೃದ್ಧಿ ಕುರಿತಾದ ವಾಗ್ದಾನಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಶ್ರಮಿಸುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘದ ಮಾಜಿ ನಿರ್ದೇಶಕ ಗೀರಿಶ್, ಮುಖಂಡರಾದ ಕಪಾಲಿಮೋಹನ್,ರಾಜಶೇಖರ್,ಕಪಾಲಿಮಂಜು,ರಾಮಲಿಂಗಪ್ಪ,ಮಂಜುನಾಥ್, ಮಾಡಿ ವೀರಣ್ಣಮಂಜು,ನಗರ್ತ ಮಹಿಳಾ ಸಂಘದ ಮುಖಂಡರಾದ ಅಮುದಾ,ಅನಿತಾ ಆಯೋಧ್ಯ ನಗರದ ನಾಮಧಾರಿ ಸಂಘದ ಸಂಚಾಲಕ ಪಾಳ್ಯಶ್ರೀನಿವಾಸಶೆಟ್ಟಿ,ಪುಟ್ಟರಾಜು,ನಂಬಿಹಳ್ಳಿ ರಮೇಶ್,ಗುರುಮೂರ್ತಿ, ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



