ನ್ಯೂಜ್ ಡೆಸ್ಕ್:ಬಾರ್ ಮಾಡಲು ಅಡ್ಡಿಯಾಗುತ್ತದೆ ಎಂಬ ಕಾರಣಕ್ಕೆ ರಾತ್ರೋ ರಾತ್ರಿ ಜೆಸಿಬಿ ತಂದು ಕಿಡಿಗೇಡಿಗಳು ಆಂಜನೇಯ ಸ್ವಾಮಿಯ ದೇವಸ್ಥಾನವನ್ನೇ ಧ್ವಂಸ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ನಂದಗುಡಿ ಗ್ರಾಮದಲ್ಲಿ ನಡೆದಿದೆ.
ಕೆಲ ಸ್ಥಳೀಯರು ಕಳೆದ ಕೆಲ ದಿನಗಳ ಹಿಂದೆ ದೇವಸ್ಥಾನದ ಸಮೀಪದಲ್ಲೇ ಬಾರ್ ನಿರ್ಮಾಣ ಮಾಡಲು ಮುಂದಾಗಿ ಅಬಕಾರಿ ಇಲಾಖೆಗೆ ಅರ್ಜಿ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದು ಈ ವಿಷಯ ತಿಳಿದ ದೇವಸ್ಥಾನದ ಆಡಳಿತ ಮಂಡಳಿಯವರು ಅನುಮತಿ ನೀಡದಂತೆ ಅಬಕಾರಿ ಇಲಾಖೆಗೆ ಪತ್ರ ಬರೆದಿದ್ದಾರಂತೆ.
ಉದ್ದೇಶಿತ ಬಾರ್ ಮಾಡುವ ಸಮೀಪ ಆಂಜನೇಯನ ದೇಗುಲವಿದೆ. ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಭಕ್ತರು ದೇಗುಲಕ್ಕೆ ಬರುತ್ತಾರೆ ಬಾರ್ ನಿರ್ಮಾಣ ಮಾಡಿದ್ರೆ ತೊಂದರೆಯಾಗುತ್ತೆ ಎಂಬ ಕಾರಣಕ್ಕೆ ದೇವಸ್ಥಾನ ಆಡಳಿತ ಮಂಡಳಿ ಪತ್ರ ಬರೆದಿತ್ತು. ಇದರಿಂದ ಕಿಡಿಗೇಡಿಗಳು ರಾತ್ರೋ ರಾತ್ರಿ ದೇಗುಲವನ್ನೇ ಕೆಡವಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ನಸುಕಿನಲ್ಲಿ ವಾಕಿಂಗ್ ಬಂದಿದ್ದವರು ದೇಗುಲ ನೆಲಸಮ ಆಗಿದ್ದನ್ನು ಗಮನಿಸಿ ನಂದಗುಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಮತ್ತು ದೇವಸ್ಥಾನದ ಭಕ್ತರು ದಾವಿಸಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



