ನ್ಯೂಜ್ ಡೆಸ್ಕ್:ಬಾರ್ ಮಾಡಲು ಅಡ್ಡಿಯಾಗುತ್ತದೆ ಎಂಬ ಕಾರಣಕ್ಕೆ ರಾತ್ರೋ ರಾತ್ರಿ ಜೆಸಿಬಿ ತಂದು ಕಿಡಿಗೇಡಿಗಳು ಆಂಜನೇಯ ಸ್ವಾಮಿಯ ದೇವಸ್ಥಾನವನ್ನೇ ಧ್ವಂಸ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ನಂದಗುಡಿ ಗ್ರಾಮದಲ್ಲಿ ನಡೆದಿದೆ.
ಕೆಲ ಸ್ಥಳೀಯರು ಕಳೆದ ಕೆಲ ದಿನಗಳ ಹಿಂದೆ ದೇವಸ್ಥಾನದ ಸಮೀಪದಲ್ಲೇ ಬಾರ್ ನಿರ್ಮಾಣ ಮಾಡಲು ಮುಂದಾಗಿ ಅಬಕಾರಿ ಇಲಾಖೆಗೆ ಅರ್ಜಿ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದು ಈ ವಿಷಯ ತಿಳಿದ ದೇವಸ್ಥಾನದ ಆಡಳಿತ ಮಂಡಳಿಯವರು ಅನುಮತಿ ನೀಡದಂತೆ ಅಬಕಾರಿ ಇಲಾಖೆಗೆ ಪತ್ರ ಬರೆದಿದ್ದಾರಂತೆ.
ಉದ್ದೇಶಿತ ಬಾರ್ ಮಾಡುವ ಸಮೀಪ ಆಂಜನೇಯನ ದೇಗುಲವಿದೆ. ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಭಕ್ತರು ದೇಗುಲಕ್ಕೆ ಬರುತ್ತಾರೆ ಬಾರ್ ನಿರ್ಮಾಣ ಮಾಡಿದ್ರೆ ತೊಂದರೆಯಾಗುತ್ತೆ ಎಂಬ ಕಾರಣಕ್ಕೆ ದೇವಸ್ಥಾನ ಆಡಳಿತ ಮಂಡಳಿ ಪತ್ರ ಬರೆದಿತ್ತು. ಇದರಿಂದ ಕಿಡಿಗೇಡಿಗಳು ರಾತ್ರೋ ರಾತ್ರಿ ದೇಗುಲವನ್ನೇ ಕೆಡವಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ನಸುಕಿನಲ್ಲಿ ವಾಕಿಂಗ್ ಬಂದಿದ್ದವರು ದೇಗುಲ ನೆಲಸಮ ಆಗಿದ್ದನ್ನು ಗಮನಿಸಿ ನಂದಗುಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಮತ್ತು ದೇವಸ್ಥಾನದ ಭಕ್ತರು ದಾವಿಸಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



