ಶ್ರೀನಿವಾಸಪುರ: ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ವಿದ್ಯಾರ್ಥಿ ದಸೆಯಲ್ಲಿ ಕಲಿಯುವ ಆಸಕ್ತಿ ವಹಿಸಿದರೆ ಭವಿಷ್ಯತ್ತಿನಲ್ಲಿ ಸಂಸ್ಕಾರವಂತ ಪ್ರಜೆಯಾಗಲು ಸಹಕಾರಿಯಾಗುತ್ತದೆ ಎಂದು ಶ್ರೀನಿವಾಸಪುರ ಸೆಂಟ್ರಲ್ನ ರೋಟರಿ ಅಧ್ಯಕ್ಷ ಹಾಗು ತಾ.ಪಂ ಮಾಜಿ ಸದಸ್ಯ ಮಂಜುನಾಥರೆಡ್ಡಿ ಹೇಳಿದರು.ಅವರು ತಾಲೂಕಿನ ಗಡಿಗ್ರಾಮವಾದ ಪಂಚಾಯಿತಿ ಮುಖ್ಯಕೇಂದ್ರ ಮುದಿಮೊಡಗು ಸರ್ಕಾರಿ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಆಂಗ್ಲಭಾಷ ನಿಘಂಟು ವಿತರಿಸಿ ಮಾತನಾಡಿದರು.
ಸೇವೆ ಅನ್ನುವ ಪದಕ್ಕೆ ಅಂತ್ಯ ಹಾಗು ವಿರಾಮ ಇರುವುದಿಲ್ಲ ಸಮಾಜದಲ್ಲಿ ಯಾವುದೇ ರೀತಿಯಲ್ಲೂ ಸೇವೆ ಒದಗಿಸುವ ಮೂಲಕ ಸಾಮಾಜಿಕ ಕಾಳಜಿ ಹೊಂದುವ ಮೂಲಕ ವಿದ್ಯಾರ್ಥಿಗಳು ಸೇವೆ ಕುರಿತು ಆಸಕ್ತರಾಗಬೇಕು,ಶಾಲೆಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಸರ್ಕಾರದಿಂದ ಒದಗಿಸಲು ಸಾಧ್ಯವಿಲ್ಲ. ಇಂತಹ ಸಂದರ್ಭಗಳಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ರೋಟರಿ ಸಂಸ್ಥೆ ನೆರವಿಗೆ ಬರಲಿದೆ ಎಂದರು.
ರೋಟರಿ ಶ್ರೀನಿವಾಸಪುರ ಸೆಂಟ್ರಲ್ನ ಕಾರ್ಯದರ್ಶಿ ಹಾಗು ಶಿಕ್ಷಕ ಶಿವಮೂರ್ತಿ ಮಾತನಾಡಿ ಆಂಧ್ರದ ಗಡಿಭಾಗದ ಗ್ರಾಮಗಳ ವಿದ್ಯಾರ್ಥಿಗಳಿಗೆ ಭಾಷ ಸುಲಲಿತವಾಗಿ ಮಾತನಾಡಲು ಕಲಿಯಲು ಇಂಗ್ಲೀಷ್ ನಿಘಂಟು ಪ್ರಯೋಜನವಾಗುತ್ತದೆ ಇದರಿಂದಾಗಿ ಶ್ರೀನಿವಾಸಪುರ ಸೆಂಟ್ರಲ್ ರೋಟರಿ ವತಿಯಿಂದ ನೀಡಿರುವ ಉಚಿತವಾಗಿ ನಿಘಂಟುಗಳನ್ನು ಗಡಿಭಾಗದ ಮುದಿಮೊಡಗು ಶಾಲಾ ವಿದ್ಯಾರ್ಥಿಗಳಿಗೆ ವಿತರಿಸಲಾಗಿದೆ ಎಂದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



