ಶ್ರೀನಿವಾಸಪುರ: ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ವಿದ್ಯಾರ್ಥಿ ದಸೆಯಲ್ಲಿ ಕಲಿಯುವ ಆಸಕ್ತಿ ವಹಿಸಿದರೆ ಭವಿಷ್ಯತ್ತಿನಲ್ಲಿ ಸಂಸ್ಕಾರವಂತ ಪ್ರಜೆಯಾಗಲು ಸಹಕಾರಿಯಾಗುತ್ತದೆ ಎಂದು ಶ್ರೀನಿವಾಸಪುರ ಸೆಂಟ್ರಲ್ನ ರೋಟರಿ ಅಧ್ಯಕ್ಷ ಹಾಗು ತಾ.ಪಂ ಮಾಜಿ ಸದಸ್ಯ ಮಂಜುನಾಥರೆಡ್ಡಿ ಹೇಳಿದರು.ಅವರು ತಾಲೂಕಿನ ಗಡಿಗ್ರಾಮವಾದ ಪಂಚಾಯಿತಿ ಮುಖ್ಯಕೇಂದ್ರ ಮುದಿಮೊಡಗು ಸರ್ಕಾರಿ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಆಂಗ್ಲಭಾಷ ನಿಘಂಟು ವಿತರಿಸಿ ಮಾತನಾಡಿದರು.
ಸೇವೆ ಅನ್ನುವ ಪದಕ್ಕೆ ಅಂತ್ಯ ಹಾಗು ವಿರಾಮ ಇರುವುದಿಲ್ಲ ಸಮಾಜದಲ್ಲಿ ಯಾವುದೇ ರೀತಿಯಲ್ಲೂ ಸೇವೆ ಒದಗಿಸುವ ಮೂಲಕ ಸಾಮಾಜಿಕ ಕಾಳಜಿ ಹೊಂದುವ ಮೂಲಕ ವಿದ್ಯಾರ್ಥಿಗಳು ಸೇವೆ ಕುರಿತು ಆಸಕ್ತರಾಗಬೇಕು,ಶಾಲೆಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಸರ್ಕಾರದಿಂದ ಒದಗಿಸಲು ಸಾಧ್ಯವಿಲ್ಲ. ಇಂತಹ ಸಂದರ್ಭಗಳಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ರೋಟರಿ ಸಂಸ್ಥೆ ನೆರವಿಗೆ ಬರಲಿದೆ ಎಂದರು.
ರೋಟರಿ ಶ್ರೀನಿವಾಸಪುರ ಸೆಂಟ್ರಲ್ನ ಕಾರ್ಯದರ್ಶಿ ಹಾಗು ಶಿಕ್ಷಕ ಶಿವಮೂರ್ತಿ ಮಾತನಾಡಿ ಆಂಧ್ರದ ಗಡಿಭಾಗದ ಗ್ರಾಮಗಳ ವಿದ್ಯಾರ್ಥಿಗಳಿಗೆ ಭಾಷ ಸುಲಲಿತವಾಗಿ ಮಾತನಾಡಲು ಕಲಿಯಲು ಇಂಗ್ಲೀಷ್ ನಿಘಂಟು ಪ್ರಯೋಜನವಾಗುತ್ತದೆ ಇದರಿಂದಾಗಿ ಶ್ರೀನಿವಾಸಪುರ ಸೆಂಟ್ರಲ್ ರೋಟರಿ ವತಿಯಿಂದ ನೀಡಿರುವ ಉಚಿತವಾಗಿ ನಿಘಂಟುಗಳನ್ನು ಗಡಿಭಾಗದ ಮುದಿಮೊಡಗು ಶಾಲಾ ವಿದ್ಯಾರ್ಥಿಗಳಿಗೆ ವಿತರಿಸಲಾಗಿದೆ ಎಂದರು.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Wednesday, June 18