ಶ್ರೀನಿವಾಸಪುರ: ಲೋಕಸಭೆ ಚುನಾವಣೆಗೆ ಭಾರತ ಚುನಾವಣಾ ಆಯೋಗವು ಶೀಘ್ರದಲ್ಲಿಯೇ ವೇಳಾಪಟ್ಟಿ ಪ್ರಕಟಿಸಲಿದ್ದು, ಚುನಾವಣೆ ಘೋಷಣೆಯಾದ ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬರುತ್ತದೆ. ಹೀಗಾಗಿ ಎಲ್ಲ ಸಿದ್ಧತೆಗಳನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅಕ್ರಂಪಾಷ ತಿಳಿಸಿದರು.
ಅವರು ಲೋಕಸಭೆ ಚುನಾವಣೆ ಸಂಬಂಧ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ನಾರಯಣ್ ಜೊತೆಗೂಡಿ ಶ್ರೀನಿವಾಸಪುರಕ್ಕೆ ಭೇಟಿ ನೀಡಿ ತಹಶೀಲ್ದಾರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಚುನಾವಣೆ ಸಂಬಂದಿತ ತಾಲೂಕು ಆಡಳಿತ ಕೈಗೊಂಡಿರುವ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿದರು.
ಚುನಾವಣೆಗೆ ನೀತಿ ಸಂಹಿತೆ ಜಾರಿಯಾದ ಕೂಡಲೆ ಸಾರ್ವಜನಿಕ ಸ್ಥಳಗಳು ಸೇರಿದಂತೆ ವಿವಿಧೆಡೆ ಅಳವಡಿಸಲಾಗಿರುವ ಜಾಹೀರಾತು, ಪ್ರಕಟಣೆ, ಬ್ಯಾನರ್ಗಳನ್ನು ತೆರವುಗೊಳಿಸಿ,ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸುವ ನಿಟ್ಟಿನಲ್ಲಿ ತಹಸಿಲ್ದಾರರ ಸೇರಿದಂತೆ ತಾಲೂಕಿನ ಅಧಿಕಾರಿಗಳ ಪಾತ್ರ ಮುಖ್ಯವಾಗಿದ್ದು ಚುನಾವಣಾ ಆಯೋಗದ ನಿರ್ದೇಶನವನ್ನು ಪಾಲಿಸಲು ಅಧಿಕಾರಿಗಳು ಸಹಕಾರ ನೀಡುವಂತೆ ಸೂಚಿಸಿದರು.
ಚುನಾವಣೆಗಾಗಿ ಈಗಾಗಲೆ ನಿಗದಿಪಡಿಸಲಾಗಿರುವ ಮತಗಟ್ಟೆಗಳಲ್ಲಿ ವಿಕಲಚೇತನರಿಗಾಗಿ ರ್ಯಾಂಪ್ ವ್ಯವಸ್ಥೆ ಇರುವುದು ಸೇರಿದಂತೆ ಶೌಚಾಲಯ, ವಿದ್ಯುತ್ ಸಂಪರ್ಕ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳು ಇರುವ ಕುರಿತು ಪರಶೀಲಿಸಿ ಅವಶ್ಯಕತೆಗಳನ್ನು ಸರಿಪಡಿಸುವಂತೆ ಹೇಳಿದರು.
ಮತಯಂತ್ರಗಳನ್ನು ಇಡುವಂತ ಸ್ಟ್ರಾಂಗ್ ರೂಮ್ ಕುರಿತಂತೆ ಬಾಲಕೀಯರ ಕಾಲೇಜಿಗೆ ಕೋಲಾರ ಜಿಲ್ಲಾಧಿಕಾರಿ ಅಕ್ರಂಪಾಷ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ರವರು ಭೇಟಿ ನೀಡಿ ಸ್ಟ್ರಾಂಗ್ ರೂಮ್ ಗಳನ್ನು ಪರಿಶೀಲನೆ ನಡೆಸಿದರು ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ಸುಧೀಂದ್ರ,ತಾಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ಶಿವಕುಮಾರಿ ಪುರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣ ಕಂದಾಯ ನೀರಿಕ್ಷಕಾರದ ಮುನಿರೆಡ್ಡಿ,ಗುರುರಾಜರಾವ್,ಕಂದಾಯ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಇದ್ದರು
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Monday, April 28