ಚಿಂತಾಮಣಿ:-ಚಿಂತಾಮಣಿ ತಾಲೂಕಿನ ಕೆಲ ಗ್ರಾಮಗಳಲ್ಲಿ ಭೂಕಂಪನ ಆಗಿದ್ದು ಜನತೆ ಬಯಭೀತರಾಗಿ ಮನೆಯಿಂದ ಹೊರಬಂದ ಘಟನೆ ಇಂದು ಮಂಗಳವಾರ ರಾತ್ರಿ ಸುಮಾರು 8.50 ಗಂಟೆ ಸಮಯದಲ್ಲಿ ನಡೆದಿರುತ್ತದೆ.
ಚಿಂತಾಮಣಿ ತಾಲೂಕಿನ ಕೆಂಚರ್ಲಾಹಳ್ಳಿ ಪೋಲಿಸ್ ಠಾಣೆ ವ್ಯಾಪ್ತಿಯ ಮಿಟ್ಟಹಳ್ಳಿ,ಅಪ್ಸಾನಹಳ್ಳಿ, ದೊಡ್ಡಹಳ್ಳಿ,ನಂದನಹಳ್ಳಿ, ಗೋನಿಪಲ್ಲಿ,ಅನಪಲ್ಲಿ,ರಾಸಪಲ್ಲಿ ಹಾಗು ಸುತ್ತುಮುತ್ತಲಿನ ಹಲವಾರು ಗ್ರಾಮಗಳಲ್ಲಿ ಭೂಮಿನಡುಗಿದ ಅನುಭವ ಆಗಿದೆ ಈ ಸಂದರ್ಭದಲ್ಲಿ ಮನೆಯಲ್ಲಿದ್ದ ಜನರು ಹೊರಗೆ ಬಂದಿರುತ್ತಾರೆ.ಕೆಲವು ಗ್ರಾಮಗಳಲ್ಲಿ ದೊಡ್ಡ ಸದ್ದಿನ ಕಂಪನ ನಡೆದರೆ ಇನ್ನೂ ಕೆಲವು ಗ್ರಾಮಗಳಲ್ಲಿ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದೆ. ಆದರೆ ಯಾವುದೇ ಪ್ರಾಣ ಹಾನಿ ಆಗಿಲ್ಲ ಎನ್ನುತ್ತಾರೆ ಗ್ರಾಮಸ್ಥರು.
ಭೂಮಿಯ ಕಂಪನದಿಂದ ಮನೆಯಲ್ಲಿನ ಪಾತ್ರೆಗಳು ಅಲ್ಲಾಡಿ ಕೆಳಗೆ ಬಿದ್ದಿದ್ದು ಜನತೆ ಆತಂಕ ಗೊಂಡಿರುತ್ತಾರೆ. ಮನೆಯಿಂದ ಹೊರ ಬಂದ ಜನತೆ ರಸ್ತೆಗಳಲ್ಲಿ ನಿಂತು ಇದು ನಿಜನಾ ಅಥಾವ ಕನಸ ಎಂದು ಆತಂಕದಿಂದ ಪರಸ್ಪರ ಮುಟ್ಟಿನೊಡಿಕೊಂಡು ಅನಿಭವ ಹೇಳಿಕೊಳ್ಳುತ್ತಿದ್ದಾರೆ.
ಮನೆ ಮಂದಿಯಲ್ಲ ಮನೆಯಿಂದ ಹೊರ ಬಂದಿದ್ದು ಈಗ ಮತ್ತೆ ಮನೆಯ ಒಳಗೆ ಹೋಗಲು ಜನತೆಗೆ ಧೈರ್ಯವೇ ಇಲ್ಲವಂತೆ ಹೀಗೆಂದು ನಡು ರಸ್ತೆಯಲ್ಲೇ ನಿಂತ ಗ್ರಾಮಸ್ಥರು ಬೆಡ್ ಶೀಟ್ ಹೊದ್ದಿಕೊಂಡು ಬಿಳುತ್ತಿರುವ ಮಂಜಿನಲ್ಲೆ ನಡುಗುತ್ತ ಹೇಳುತ್ತಾರೆ.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27