ಚಿಂತಾಮಣಿ:-ಚಿಂತಾಮಣಿ ತಾಲೂಕಿನ ಕೆಲ ಗ್ರಾಮಗಳಲ್ಲಿ ಭೂಕಂಪನ ಆಗಿದ್ದು ಜನತೆ ಬಯಭೀತರಾಗಿ ಮನೆಯಿಂದ ಹೊರಬಂದ ಘಟನೆ ಇಂದು ಮಂಗಳವಾರ ರಾತ್ರಿ ಸುಮಾರು 8.50 ಗಂಟೆ ಸಮಯದಲ್ಲಿ ನಡೆದಿರುತ್ತದೆ.
ಚಿಂತಾಮಣಿ ತಾಲೂಕಿನ ಕೆಂಚರ್ಲಾಹಳ್ಳಿ ಪೋಲಿಸ್ ಠಾಣೆ ವ್ಯಾಪ್ತಿಯ ಮಿಟ್ಟಹಳ್ಳಿ,ಅಪ್ಸಾನಹಳ್ಳಿ, ದೊಡ್ಡಹಳ್ಳಿ,ನಂದನಹಳ್ಳಿ, ಗೋನಿಪಲ್ಲಿ,ಅನಪಲ್ಲಿ,ರಾಸಪಲ್ಲಿ ಹಾಗು ಸುತ್ತುಮುತ್ತಲಿನ ಹಲವಾರು ಗ್ರಾಮಗಳಲ್ಲಿ ಭೂಮಿನಡುಗಿದ ಅನುಭವ ಆಗಿದೆ ಈ ಸಂದರ್ಭದಲ್ಲಿ ಮನೆಯಲ್ಲಿದ್ದ ಜನರು ಹೊರಗೆ ಬಂದಿರುತ್ತಾರೆ.ಕೆಲವು ಗ್ರಾಮಗಳಲ್ಲಿ ದೊಡ್ಡ ಸದ್ದಿನ ಕಂಪನ ನಡೆದರೆ ಇನ್ನೂ ಕೆಲವು ಗ್ರಾಮಗಳಲ್ಲಿ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದೆ. ಆದರೆ ಯಾವುದೇ ಪ್ರಾಣ ಹಾನಿ ಆಗಿಲ್ಲ ಎನ್ನುತ್ತಾರೆ ಗ್ರಾಮಸ್ಥರು.
ಭೂಮಿಯ ಕಂಪನದಿಂದ ಮನೆಯಲ್ಲಿನ ಪಾತ್ರೆಗಳು ಅಲ್ಲಾಡಿ ಕೆಳಗೆ ಬಿದ್ದಿದ್ದು ಜನತೆ ಆತಂಕ ಗೊಂಡಿರುತ್ತಾರೆ. ಮನೆಯಿಂದ ಹೊರ ಬಂದ ಜನತೆ ರಸ್ತೆಗಳಲ್ಲಿ ನಿಂತು ಇದು ನಿಜನಾ ಅಥಾವ ಕನಸ ಎಂದು ಆತಂಕದಿಂದ ಪರಸ್ಪರ ಮುಟ್ಟಿನೊಡಿಕೊಂಡು ಅನಿಭವ ಹೇಳಿಕೊಳ್ಳುತ್ತಿದ್ದಾರೆ.
ಮನೆ ಮಂದಿಯಲ್ಲ ಮನೆಯಿಂದ ಹೊರ ಬಂದಿದ್ದು ಈಗ ಮತ್ತೆ ಮನೆಯ ಒಳಗೆ ಹೋಗಲು ಜನತೆಗೆ ಧೈರ್ಯವೇ ಇಲ್ಲವಂತೆ ಹೀಗೆಂದು ನಡು ರಸ್ತೆಯಲ್ಲೇ ನಿಂತ ಗ್ರಾಮಸ್ಥರು ಬೆಡ್ ಶೀಟ್ ಹೊದ್ದಿಕೊಂಡು ಬಿಳುತ್ತಿರುವ ಮಂಜಿನಲ್ಲೆ ನಡುಗುತ್ತ ಹೇಳುತ್ತಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



