ಚಿಂತಾಮಣಿ:-ಚಿಂತಾಮಣಿ ತಾಲೂಕಿನ ಕೆಲ ಗ್ರಾಮಗಳಲ್ಲಿ ಭೂಕಂಪನ ಆಗಿದ್ದು ಜನತೆ ಬಯಭೀತರಾಗಿ ಮನೆಯಿಂದ ಹೊರಬಂದ ಘಟನೆ ಇಂದು ಮಂಗಳವಾರ ರಾತ್ರಿ ಸುಮಾರು 8.50 ಗಂಟೆ ಸಮಯದಲ್ಲಿ ನಡೆದಿರುತ್ತದೆ.
ಚಿಂತಾಮಣಿ ತಾಲೂಕಿನ ಕೆಂಚರ್ಲಾಹಳ್ಳಿ ಪೋಲಿಸ್ ಠಾಣೆ ವ್ಯಾಪ್ತಿಯ ಮಿಟ್ಟಹಳ್ಳಿ,ಅಪ್ಸಾನಹಳ್ಳಿ, ದೊಡ್ಡಹಳ್ಳಿ,ನಂದನಹಳ್ಳಿ, ಗೋನಿಪಲ್ಲಿ,ಅನಪಲ್ಲಿ,ರಾಸಪಲ್ಲಿ ಹಾಗು ಸುತ್ತುಮುತ್ತಲಿನ ಹಲವಾರು ಗ್ರಾಮಗಳಲ್ಲಿ ಭೂಮಿನಡುಗಿದ ಅನುಭವ ಆಗಿದೆ ಈ ಸಂದರ್ಭದಲ್ಲಿ ಮನೆಯಲ್ಲಿದ್ದ ಜನರು ಹೊರಗೆ ಬಂದಿರುತ್ತಾರೆ.ಕೆಲವು ಗ್ರಾಮಗಳಲ್ಲಿ ದೊಡ್ಡ ಸದ್ದಿನ ಕಂಪನ ನಡೆದರೆ ಇನ್ನೂ ಕೆಲವು ಗ್ರಾಮಗಳಲ್ಲಿ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದೆ. ಆದರೆ ಯಾವುದೇ ಪ್ರಾಣ ಹಾನಿ ಆಗಿಲ್ಲ ಎನ್ನುತ್ತಾರೆ ಗ್ರಾಮಸ್ಥರು.
ಭೂಮಿಯ ಕಂಪನದಿಂದ ಮನೆಯಲ್ಲಿನ ಪಾತ್ರೆಗಳು ಅಲ್ಲಾಡಿ ಕೆಳಗೆ ಬಿದ್ದಿದ್ದು ಜನತೆ ಆತಂಕ ಗೊಂಡಿರುತ್ತಾರೆ. ಮನೆಯಿಂದ ಹೊರ ಬಂದ ಜನತೆ ರಸ್ತೆಗಳಲ್ಲಿ ನಿಂತು ಇದು ನಿಜನಾ ಅಥಾವ ಕನಸ ಎಂದು ಆತಂಕದಿಂದ ಪರಸ್ಪರ ಮುಟ್ಟಿನೊಡಿಕೊಂಡು ಅನಿಭವ ಹೇಳಿಕೊಳ್ಳುತ್ತಿದ್ದಾರೆ.
ಮನೆ ಮಂದಿಯಲ್ಲ ಮನೆಯಿಂದ ಹೊರ ಬಂದಿದ್ದು ಈಗ ಮತ್ತೆ ಮನೆಯ ಒಳಗೆ ಹೋಗಲು ಜನತೆಗೆ ಧೈರ್ಯವೇ ಇಲ್ಲವಂತೆ ಹೀಗೆಂದು ನಡು ರಸ್ತೆಯಲ್ಲೇ ನಿಂತ ಗ್ರಾಮಸ್ಥರು ಬೆಡ್ ಶೀಟ್ ಹೊದ್ದಿಕೊಂಡು ಬಿಳುತ್ತಿರುವ ಮಂಜಿನಲ್ಲೆ ನಡುಗುತ್ತ ಹೇಳುತ್ತಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



