ಕೋಲಾರ: ಕೋಲಾರ-ಚಿಕ್ಕಬಳ್ಳಾಪುರದ ಹಾಲು ಒಕ್ಕೂಟದ ಅಧ್ಯಕ್ಷ ಹಾಗು ನಿರ್ದೇಶಕರ ಮನೆಗಳ ಮೇಲೆ ಕೇಂದ್ರ ಸರ್ಕಾರದ ಜಾರಿ ನಿರ್ದೇಶನಾಲಯ( ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಹಾಲು ಒಕ್ಕೂಟದ ಅಧ್ಯಕ್ಷ ಹಾಗು ಮಾಲೂರು ಶಾಸಕ ನಂಜೇಗೌಡ ಅವರಿಗೆ ಸೇರಿದ ಮಾಲೂರು ತಾಲೂಕಿನ ಕೊಮ್ಮನಹಳ್ಳಿ ಗ್ರಾಮದ ಮನೆಯಲ್ಲಿ ಶೋಧ,ಹುತ್ತೂರು ಹೋಬಳಿ ಕೋಚಿಮುಲ್ ಕಚೇರಿಯಲ್ಲಿ, ಕೊಮ್ಮನಹಳ್ಳಿ ನಂಜುಂಡೇಶ್ವರ ಸ್ಟೋನ್ ಕ್ರಷರ್ನಲ್ಲಿ ಹಾಗು ಶಾಸಕರ ಬೆಂಗಳೂರಿನ ನಿವಾಸದಲ್ಲೂ ಪರಿಶೀಲನೆ ನಡೆಸಿದ್ದಾರೆ.
ಕೋಚಿಮುಲ್ ನೇಮಕಾತಿಯಲ್ಲಿ ಅವ್ಯವಹಾರ ಹಿನ್ನೆಲೆ ದಾಳಿಯಾಗಿದೆ ಎಂದು ಶಂಕಿಸಲಾಗುತ್ತಿದ್ದು ನಂಜೇಗೌಡ ಅವರ ಆಪ್ತ ಸಹಾಯಕ ಹರೀಶ್ ಅವರ ದೊಡ್ಡಮಲ್ಲೆ ಗ್ರಾಮದ ಮನೆ,ಕೋಚಿಮುಲ್ ವ್ಯವಸ್ಥಾಪಕ ನಿರ್ದೇಶಕ(MD) ಗೋಪಾಲ್ ಮೂರ್ತಿ ಅವರ ಮನೆ, ಕೋಚಿಮುಲ್ ಆಡಳಿತಾತ್ಮಕ ನಿರ್ದೇಶಕ ನಾಗೇಶ್ ಅವರ ಬೆಂಗಳೂರು ರಾಮಮೂರ್ತಿ ನಗರದಲ್ಲಿರುವ ಮನೆ, ಮಾಲೂರು ಕೋಚಿಮುಲ್ ಕಚೇರಿ,ಚಿಂತಾಮಣಿ ತಾಲೂಕಿನ ನಿರ್ದೇಶಕ ಅಶ್ವಥನಾರಯಣಬಾಬು ಅವರ ಚಿಂತಾಮಣಿಯ ಪ್ರಭಾಕರ ಬಡಾವಣೆ ಮನೆ ಸೇರಿದಂತೆ 10 ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ಮಾಡಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಕೋಲಾರ-ಚಿಕ್ಕಬಳ್ಳಾಪುರದ ಹಾಲು ಒಕ್ಕೂಟದ ಸಿಬ್ಬಂದಿ ನೇಮಕಾತಿ ವಿಚಾರದಲ್ಲಿ ಅಕ್ರಮ ಆಗಿದೆ ಎಂಬ ಆರೋಪ ಇತ್ತೀಚೆಗೆ ಕೇಳಿ ಬಂದಿತ್ತು ಅಲ್ಲದೆ ಅಂತಿಮ ನೇಮಕಾತಿ ಆದೇಶದ ಪಟ್ಟಿ ಪ್ರಕಟವಾಗುವ ಮುನ್ನವೇ ಸಾಮಾಜಿಕ ಜಾಲತಾಣದಲ್ಲಿ ನೇಮಕಾತಿ ಪಟ್ಟಿಯ ಪ್ರತಿ ಹರಿದಾಡಿತ್ತು ಅದರಲ್ಲೂ ಅಭ್ಯರ್ಥಿಗಳ ಹೆಸರಿನ ಮುಂದೆ ಶಿಪಾರಸು ಮಾಡಿದ ಮುಖಂಡರ ಹೆಸರೂ ನಮೂದಿಸಲಾಗಿತ್ತು ಇದು ಹಲವರ ಅಸಾಮಾಧಾನಕ್ಕೆ ಕಾರಣ ಆಗಿತ್ತು ಇದರ ನಡುವೆ ಇಂದು ಇಡಿ ದಾಳಿ ನಡೆದಿದೆ ಸ್ಪಷ್ಟ ಮಾಹಿತಿ ಯಾರಿಗೂ ಇಲ್ಲ ಎನ್ನಲಾಗುತ್ತಿದೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



