ಶ್ರೀನಿವಾಸಪುರ:ಶಿಕ್ಷಣ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಮಾಂಡೂಸ್ ಚಂಡಮಾರುತದ ಚಳಿ-ಮಳೆಯಲ್ಲಿ ನೆಂದು ಪರೆದಾಡಿದ ವಿದ್ಯಾರ್ಥಿಗಳು!ಇಂದು ವಾರಾಂತ್ಯ ಶನಿವಾರ ಮಾರ್ನಿಂಗ್ ಸ್ಕೂಲ್ ವಿದ್ಯಾರ್ಥಿಗಳ ಕಥೆ ಇದು,ಸುರಿಯುವ ಮಳೆಯಲ್ಲೆ ಶಾಲೆಗೆ ಬಂದ ಮಕ್ಕಳು ಮಳೆಯಲ್ಲಿ ನೆನೆದು ಮುದ್ದೆಯಾದರೂ,ಇದು ಪಟ್ಟಣ ಶಾಲೆಗಳ ಪರಿಸ್ಥಿತಿಯಾದರೆ ಗ್ರಾಮೀಣ ಭಾಗದ ಕೆಲ ಶಾಲೆಯ ಶಿಕ್ಷಕರು ಮನೆಯಲ್ಲೆ ಕುಳಿತು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗು ಸದಸ್ಯರನ್ನು ಫೊನ್ ಮೂಲಕ ಸಂಪರ್ಕಿಸಿ ಅವರ ಒಪ್ಪಿಗೆ ಪಡೆದು ಶಾಲೆಗಳಿಗೆ ರಜೆ ಘೋಷಿಸಿದರೆ, ಇನ್ನೂಳಿದಂತೆ ಶಿಕ್ಷಕರು ಮಳೆ-ಗಾಳಿ ಲೆಕ್ಕಿಸದೆ ಶಾಲೆಗೆ ಹೋಗಿ ಮಕ್ಕಳು ಬಾರದ ಹಿನ್ನಲೆಯಲ್ಲಿ ಊರಿನ ಮುಖಂಡರ,ಶಾಲಾಭಿವೃದ್ಧಿ ಸಮಿತಿಯವರ ಅಭಿಪ್ರಾಯ ಪಡೆದು ಶಾಲೆಗೆ ರಜೆ ಘೋಷಿಸಿ ಬಂದಿರುತ್ತಾರೆ.
ಭಾರತೀಯ ಹವಾಮಾನ ಇಲಾಖೆ (IMD) ಸೂಚಿಸಿರುವಂತೆ ಮಾಂಡೂಸ್ ಚಂಡಮಾರುತ ಎಫೆಕ್ಟ್ ಡಿಸೆಂಬರ್ 14 ರವರೆಗೆ ಭಾರೀ ಮಳೆಯಾಗಲಿದ್ದು ಕೋಲಾರ ಸೇರಿ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಶನಿವಾರ-ಭಾನುವಾರ ಯಲ್ಲೋ ಅಲರ್ಟ್ ಘೋಷಣೆಯಾಗಿದೆ ಇಷ್ಟೆಲ್ಲ ಮುನ್ಸೂಚನೆ ಇದ್ದರು ಕೋಲಾರ ಜಿಲ್ಲಾಡಳಿತ ಹಾಗು ಶಿಕ್ಷಣ ಇಲಾಖೆ ಅಧಿಕಾರಿಗಳು ಯಾವುದೆ ಮುಂಜಾಗ್ರತೆ ವಹಿಸಿ ಕೋಲಾರ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸದೆ ನಿರ್ಲಕ್ಷ್ಯತನ ತೋರಿದೆ ಎಂದು ಪೋಷಕರು ಆಕ್ರೊಶ ವ್ಯಕ್ತಪಡಿಸುತ್ತಾರೆ.
ಕೋಲಾರ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಜವಾಬ್ದಾರಿ ರಹಿತ ವರ್ತನೆಯ ಪರಿಣಾಮ ಮಳೆ ಲೆಕ್ಕಿಸದೆ ಶಾಲ ಮಕ್ಕಳು ಶಾಲೆಗೆ ಬಂದು ಚಳಿ ಗಾಳಿಗೆ ತತ್ತರಿಸಿ ಮಳೆಯಲ್ಲಿ ನೆನೆದು ವಿದ್ಯಾರ್ಥಿಗಳು ಮನೆಗೆ ವಾಪಸ್ಸಾಗಿದ್ದಾರೆ.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27