ಶ್ರೀನಿವಾಸಪುರ:ತಾಲೂಕಿನ ಕೋಟೆ ಕಲ್ಲೂರು ಗ್ರಾಮದಲ್ಲಿನ ಪುರಾತನ ಶ್ರೀ ಚನ್ನಕೇಶವ ಸ್ವಾಮಿ ದೇವಾಲಯದಲ್ಲಿ ಮಂಗಳವಾರದ ವೈಕುಂಠ ಏಕಾದಶಿ ಪೂಜೆ ವಿಚಾರವಾಗಿ ಗ್ರಾಮದ ಎರಡು ಗುಂಪುಗಳ ನಡುವೆ ಪ್ರತಿಷ್ಠೆ ವಿಷಯವಾಗಿ ಸಂಘರ್ಷ ಏರ್ಪಟ್ಟಿದ್ದು, ಪರಿಸ್ಥಿತಿ ತಿಳಿಗೊಳಿಸಲು ತಾಲ್ಲೂಕು ಆಡಳಿತ ಮಧ್ಯಪ್ರವೇಶ ಮಾಡಿ ಡಿಸೆಂಬರ್ 30ರಂದು ನಡೆಯಲಿರುವ ವೈಕುಂಠ ಏಕಾದಶಿ ವಿಶೇಷ ಪೂಜೆ ಕಾರ್ಯಕ್ರಮ ನೆರವೇರಿಸಲು ತಾ.ಆಡಳಿತ ಸಿದ್ದತೆ ಮಾಡಿಕೊಂಡಿದೆ.
ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ
ಚನ್ನಕೇಶವ ದೇವಾಲಯದಲ್ಲಿ ಪೂಜೆಗಾಗಿ ಏರ್ಪಟ್ಟಿರುವ ವಿಷಯ ಹಲವಾರು ದಿನಗಳಿಂದ ನಡೆಯುತ್ತಿದ್ದು ನಾಳಿನ ವೈಕುಂಠ ಏಕಾದಶಿ ಪೂಜೆ ಹಿನ್ನಲೆಯಲ್ಲಿ ಮತ್ತೆ ಮುನ್ನಲೆಗೆ ಬಂದಿದ್ದು ಕಾರ್ಯಕ್ರಮದ ಅನ್ವಯ ಪೈಪೋಟಿಗೆ ಬಿದ್ದವರಂತೆ ಪ್ರತ್ಯೇಕ ಪೂಜೆ ನಡೆಸಲು ಮುಂದಾಗಿದ್ದ ಗುಂಪುಗಳು ಪ್ರತ್ಯೇಕ ಅನ್ನ ಸಂತರ್ಪಣೆ ಮಾಡಲು ಮುಂದಾಗಿದ್ದರು ಇದು ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾದ ಹಿನ್ನಲೆಯಲ್ಲಿ ತಾಲೂಕು ತಹಶೀಲ್ದಾರ್ ಸುಧೀಂದ್ರ ಪೊಲೀಸ್ ಸಹಕಾರದೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ ದೇವಾಲಯದ ಬಳಿ ಪರಿಸ್ಥಿತಿ ಪರಿಶೀಲನೆ ನಡೆಸಿ ಅನ್ನ ಸಂತರ್ಪಣೆ ಮಾಡಲು ಹಾಕಲಾಗಿರುವ ಪ್ರತ್ಯಕ ಪೆಂಡಾಲ್ಗಳನ್ನು ತಕ್ಷಣ ತೆರವುಗೊಳಿಸುವಂತೆ ಸೂಚಿಸಿದ್ದಲ್ಲದೆ ಯಾವುದೇ ಅಹಿತಕರ ಘಟನೆ ನಡೆಯದಂತೆ ದೇವಾಲಯದ ಸುತ್ತಮುತ್ತಲು ಸೆಕ್ಷನ್ 144 ಜಾರಿಗೊಳಿಸಿ ಮುಂಜಾಗ್ರತಾ ಕ್ರಮವಾಗಿ ದೇವಾಲಯದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿರುತ್ತಾರೆ.
ಪೂಜಾ ಕಾರ್ಯಕ್ರಮಗಳು ನಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಭಕ್ತರು ತರುವಂತ ಪ್ರಸಾದ ಸಾಮಾಗ್ರಿಗಳನ್ನು ದೇವಾಲಯಕ್ಕೆ ನೀಡಬೇಕು, ಪುರೋಹಿತರೇ ಅದನ್ನು ವಿತರಿಸಲಿದ್ದಾರೆ.ವೈಕುಂಠ ಏಕಾದಶಿಗೆ 4 ಗ್ರಾಮಗಳ ಮುಖಂಡರು ಒಟ್ಟಾಗಿ ಸುಸೂತ್ರವಾಗಿ ನೆರವೇರಿಸಬೇಕು
ಎಂದು ತಹಶೀಲ್ದಾರ್ ಸೂಚಿಸಿದ್ದು ದೇವಾಲಯ ಕಟ್ಟಡ ಸರ್ಕಾರಿ ‘ಬಿ ಕರಾಬು’ ಜಾಗದಲ್ಲಿ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರ್ಪಡೆ ಮಾಡುವ ಬಗ್ಗೆ ಯೋಜನೆ ರೂಪಿಸಲಾಗುವುದು ಎಂದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



