ಶ್ರೀನಿವಾಸಪುರ:ಜೀವನಾಡಿ ಮಾವಿಗೆ ಬೆಂಬಲ ಬೆಲೆ ನೀಡಿ ರೈತರ ಹಿತ ಕಾಪಾಡಿದ ಸರ್ಕಾರಗಳಿಗೆ ಹಾಗು ಸಹಕರಿಸಿದ ಶಾಸಕ ಮತ್ತು ಅಧಿಕಾರಿಗಳಿಗೆ ಮಾವು ಬೆಳೆಗಾರರು ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾ ಮಾವು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ನೀಲಟೂರು ಚಿನ್ನಪರೆಡ್ಡಿ ಹಾಗು ಪಾತಕೋಟೆ ನವೀನ್ ಕುಮಾರ್ ನಷ್ಟದಲ್ಲಿದ್ದ ರೈತರಿಗೂ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಮಾವು ಬೆಳೆಗಾರರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದರು ಅರಂಭದಲ್ಲಿ ಬೆಳೆಗಾರರ ಪ್ರತಿಭಟನೆಗೆ ಸರ್ಕಾರ ಸೊಪ್ಪು ಹಾಕಿರಲಿಲ್ಲ ನಂತರದಲ್ಲಿ “20 ದಿನಗಳ ಕಾಲ ರೈತರೊಂದಿಗೆ ಹೋರಾಟಗಳು ನಿರಂತರವಾದ ಹಿನ್ನಲೆಯಲ್ಲಿ ರೈತರ ಬೆಳೆಗಾರರ ಪ್ರತಿಭಟನೆ ಕಾವು ಹೆಚ್ಚುತ್ತಿದ್ದಂತೆ ಬೆಡಿಕೆಗೆ ಸ್ಪಂದಿಸಿದ ಸರ್ಕಾರಗಳು ಕಳೆದ ಜೂ.26ರಂದು ಎಕರೆಗೆ 2 ಟನ್ ಮಾವಿಗೆ 4 ರೂ. ಪ್ರೋತ್ಸಾಹಧನ ಘೋಷಣೆ ಮಾಡಿ ಒಬ್ಬ ರೈತರಿಗೆ 5 ಎಕರೆವರೆಗೆ ಮಾವಿಗೆ ಬೆಂಬಲ ಬೆಲೆ ಅರ್ಹತೆ ನೀಡಲಾಗಿತ್ತು.ನಂತರದಲ್ಲಿ ಶಾಸಕ ವೆಂಕಟಶಿವಾರೆಡ್ಡಿ ಮಾಜಿ ವಿಧಾನಪರಿಷತ್ ಸದಸ್ಯ ತೂಪಲ್ಲಿಚೌಡರೆಡ್ಡಿ ಮೂಲಕ ರಾಜ್ಯ ಕೃಷಿ ಸಚಿವ ಚಲುವನಾರಯಣಸ್ವಾಮಿ ಅವರೊಂದಿಗೆ ಚರ್ಚಿಸಿ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ ಪರಿಣಾಮ, ಮಾವಿಗೆ 2 ಟನ್ ಬದಲಾಗಿ 4 ಟನ್ನಂತೆ ಪ್ರತಿ ಖಾತೆದಾರನಿಗೆ 5 ಎಕರೆಗೆ 20 ಟನ್ವರೆಗೆ ಬೆಂಬಲ ಬೆಲೆ ಕೊಡುವ ಭರವಸೆ ನೀಡಿ ಆದೇಶ ಜಾರಿ ಮಾಡಲಾಯಿತು, ರೈತರ ಪರವಾಗಿ ರಾಜ್ಯ ಕೃಷಿ ಸಚಿವ ಚೆಲುವರಾಯ ಸ್ವಾಮಿ, ಕೋಲಾರ ಉಸ್ತುವಾರಿ ಸಚಿವ ಬೈರತಿ ಸುರೇಶ್,ಕೋಲಾರ ಜಿಲ್ಲಾಧಿಕಾರಿ ರವಿ ಅವರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇವೆ ಎಂದಿರುತ್ತಾರೆ.ಪತ್ರಿಕಾಗೋಷ್ಠಿಯಲ್ಲಿ ಫಾರೂಕ್,ವೀರಪ್ಪರೆಡ್ಡಿ,ಈರಪ್ಪ,ಅಸ್ಲಾಂ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



