ಶ್ರೀನಿವಾಸಪುರ:ಸಣ್ಣ ಪುಟ್ಟ ರೈತರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ವಿನಾಕಾರಣ ತೊಂದರೆ ಕೊಡುತ್ತಿದ್ದಾರೆ ಎಂದು
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ರೈತರು ಇಂದು ಶ್ರೀನಿವಾಸಪುರದ ಅರಣ್ಯ ಇಲಾಖೆಯ ಕಚೇರಿ ಮುಂದೆ ಧರಣಿ ನಡೆಸಿ ಪ್ರತಿಭಟಿಸಿದರು. ಐವತ್ತು ಅರವತ್ತು ವರ್ಷಗಳ ಹಿಂದೆ ಖರೀದಿ ಮಾಡಿ ಸಾಗುವಳಿ ಮಾಡುತ್ತಿರುವ ಸಣ್ಣ ಪುಟ್ಟ ರೈತರ ಜಮೀನುಗಳನ್ನು ಪದೇ ಪದೇ ಸೆಟಲೈಟ್ ಸರ್ವೆ ನೆಪದಲ್ಲಿ ಗುರುತು ಹಾಕಿ ಅರ್ದ ಎಕರೆ ಮೂಕ್ಕಾಲು ಎಕರೆ ಬಿಡಬೇಕು ಎಂದು ತೊಂದರೆ ನೀಡುತ್ತಿದ್ದಾರೆ ಆರೋಪಿಸಿದರು.
ದಶಕಗಳ ಹಿಂದೆಯೆ ಅರಣ್ಯ ಇಲಾಖೆ ತಮ್ಮ ಅರಣ್ಯ ಭೂಮಿಯನ್ನು ಗಡಿ ಗುರುತು ಮಾಡಿ ಕಲ್ಲು ನೆಟ್ಟಿದ್ದರು ಈಗ ಮತ್ತೆ ಹೊಸದಾಗಿ ಸೆಟಲೈಟ್ ಸರ್ವೆ ಹೆಸರಿನಲ್ಲಿ ಕಿರುಕಿಳ ನೀಡುತ್ತಿದ್ದಾರೆ ಎಂದು ದೂರಿದ ರೈತರು ಇತ್ತಿಚಿಗೆ ಕಾಡು ಪ್ರಾಣಿಗಳಿಂದ ಆಗುತ್ತಿರುವ ಉಳಪಟಗಳಿಂದ ರೈತರು ನಷ್ಟಕ್ಕೆ ಒಳಗಾಗಿರುವ ಬಗ್ಗೆ ಅರಣ್ಯ ಇಲಾಖೆಯವರು ಬೇಜವಾಬ್ದಾರಿತನ ತೊರುತ್ತಿದ್ದಾರೆ ಎಂದರು.
ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ
ರೈತ ಸಂಘದ ಪ್ರತಿಭಟನೆ ಮಾಹಿತಿ ಇದ್ದರು ಅರಣ್ಯ ಇಲಾಖೆ ಕಚೇರಿಯಲ್ಲಿ ರೈತರ ಅಹವಾಲು ಸ್ವೀಕರಿಸಲು ಅಧಿಕಾರಿಗಳು ಇಲ್ಲದೆ ರೈತರಿಗೆ ಅಪಮಾನ ಮಾಡುತ್ತಿದ್ದಾರೆ ಎಂದು ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ನಂಬಿಹಳ್ಳಿ ಶ್ರೀರಾಮರೆಡ್ಡಿ.
ಅರಣ್ಯ ಇಲಾಖೆ ಅಧಿಕಾರಿಗಳ ಧೋರಣೆ ವಿರುದ್ದ ಆಕ್ರೋಶ ಗೊಂಡ ರೈತರು ತಾಲೂಕು ಕಚೇರಿ ಮುಂಬಾಗದಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪೋಲಿಸ್ ಇಲಾಖೆ ಇನ್ಸಪೇಕ್ಟರ್ ನಾರಯಣಸ್ವಾಮಿ ಹಾಗು ತಾಲೂಕು ಕಚೇರಿ ಶೀರಸ್ತೆದಾರ್ ಅವರು ರೈತರ ಮನವೊಲಿಸಿ ಅವರಿಂದ ಅಹವಾಲು ಸ್ವೀಕರಿಸಿದರು.ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯ ಮುಖಂಡ ವೀರಬದ್ರಸ್ವಾಮಿ,ಮೌಲಾ,ಈರಪ್ಪ ಮುಂತಾದವರು ಇದ್ದರು.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27