ಶ್ರೀನಿವಾಸಪುರ:ಉದ್ದೇಶಿತ ಯದರೂರು ಕೈಗಾರಿಕೆ ವಲಯ ನಿರ್ಮಾಣ ಸಂಬಂದ ಜಮೀನು ಸರ್ವೆ ಮಾಡಲು ಬಂದಿದ್ದ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (ಕೆಐಎಡಿಬಿ)Karnataka Industrial Areas Development Board ಅಧಿಕಾರಿಗಳ ವಾಹನ ತಡೆದ ರೈತರ ಗುಂಪು ಸರ್ವೆ ಮಾಡಲು ಅವಕಾಶ ನೀಡದೆ ವಾಪಸ್ಸು ಕಳುಹಿಸಿರುವ ಘಟನೆ ಶ್ರೀನಿವಾಸಪುರ ತಾಲೂಕಿನ ಯದರೂರು ಗ್ರಾಮದ ಬಳಿ ಮಂಗಳವಾರ ನಡೆದಿದೆ.
ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳಾದ ಶ್ರೀನಾಥ್ ಮತ್ತು ಮಂಜುನಾಥ್ ಆಗಮಿಸಿದ ವೇಳೆ ಅವರನ್ನು ಸ್ಥದಲ್ಲಿದ್ದ ಕೆಲ ರೈತರು ಬೈದು ಗಲಾಟೆ ಮಾಡಿ ಒಂದಿಂಚು ಜಮೀನು ಕೊಡಲ್ಲ ಎಂದು ಆಕ್ರೋಶ ಭರಿತರಾಗಿ ಮಾತನಾಡಿ ಬೆದರಿಸಿದ್ದಾರೆ ಎನ್ನಲಾಗಿದ್ದು.ರೈತರಿಗೆ ಯಾವುದೇ ಮಾಹಿತಿ ನೀಡದೆ ಸರ್ವೇ ಮಾಡಲು ಬಂದಿರುವುದು ತಪ್ಪು ಎಂದು ಅಧಿಕಾರಿಗಳನ್ನ ವಾಪಸ್ ಕಳಿಸಿದರು.
ಕೆಐಎಡಿಬಿ ಅಧಿಕಾರಿಗಳನ್ನು ಕಾರಿನಿಂದ ಇಳಿಯಲು ಬಿಡದೆ ವಾಗ್ವಾದಕ್ಕೆ ಇಳಿದ ರೈತರು ಮಾತಿನ ಚಕಮಕಿ ನಡೆಸಿದಲ್ಲದೆ ಪ್ರಾಣ ಬಿಟ್ಟೆವು ಜಮೀನು ಕೊಡುವುದಿಲ್ಲ.ನಿಮ್ಮ ವಾಹನಗಳನ್ನು ಸುಟ್ಟುಹಾಕುತ್ತೇವೆ ಎಂದು ತೀವ್ರವಾಗಿ ಎಚ್ಚರಿಕೆನೀಡಿದ್ದಾರೆ.
ಯದರೂರು ಕಂದಾಯ ವೃತ್ತದಲ್ಲಿ ಕೈಗಾರಿಕ ವಲಯ
ಯದರೂರು ಕಂದಾಯ ವ್ಯಾಪ್ತಿಯಲ್ಲಿ ಕೈಗಾರಿಕಾ ವಲಯ ನಿರ್ಮಿಸಲು ಕೆಐಎಡಿಬಿKIADB Industrial Areas ಯದರೂರು ಹಾಗೂ ಸುತ್ತಮುತ್ತಲ ಗ್ರಾಮಗಳ ರೈತರ ಭೂಮಿ ವಶಪಡಿಸಿಕೊಂಡು ಹಾಗೂ ಅಭಿವೃದ್ಧಿ ಮಾಡುವ ಸಂಬಂಧ ನೋಟಿಫಿಕೇಶನ್ ಜಾರಿ ಮಾಡಿದ್ದು ಶ್ರೀನಿವಾಸಪುರದ ಉಪನೋಂಣಾಧಿಕಾರಿಗಳ ಕಚೇರಿಯಲ್ಲಿ ಜಮೀನುಗಳ ಪರಭಾರೆಯನ್ನು ಸ್ಥಗಿತಗೊಳಿಸಿ ಆದೇಶಿಸಿದೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



