ಶ್ರೀನಿವಾಸಪುರ:ಉದ್ದೇಶಿತ ಯದರೂರು ಕೈಗಾರಿಕೆ ವಲಯ ನಿರ್ಮಾಣ ಸಂಬಂದ ಜಮೀನು ಸರ್ವೆ ಮಾಡಲು ಬಂದಿದ್ದ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (ಕೆಐಎಡಿಬಿ)Karnataka Industrial Areas Development Board ಅಧಿಕಾರಿಗಳ ವಾಹನ ತಡೆದ ರೈತರ ಗುಂಪು ಸರ್ವೆ ಮಾಡಲು ಅವಕಾಶ ನೀಡದೆ ವಾಪಸ್ಸು ಕಳುಹಿಸಿರುವ ಘಟನೆ ಶ್ರೀನಿವಾಸಪುರ ತಾಲೂಕಿನ ಯದರೂರು ಗ್ರಾಮದ ಬಳಿ ಮಂಗಳವಾರ ನಡೆದಿದೆ.
ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳಾದ ಶ್ರೀನಾಥ್ ಮತ್ತು ಮಂಜುನಾಥ್ ಆಗಮಿಸಿದ ವೇಳೆ ಅವರನ್ನು ಸ್ಥದಲ್ಲಿದ್ದ ಕೆಲ ರೈತರು ಬೈದು ಗಲಾಟೆ ಮಾಡಿ ಒಂದಿಂಚು ಜಮೀನು ಕೊಡಲ್ಲ ಎಂದು ಆಕ್ರೋಶ ಭರಿತರಾಗಿ ಮಾತನಾಡಿ ಬೆದರಿಸಿದ್ದಾರೆ ಎನ್ನಲಾಗಿದ್ದು.ರೈತರಿಗೆ ಯಾವುದೇ ಮಾಹಿತಿ ನೀಡದೆ ಸರ್ವೇ ಮಾಡಲು ಬಂದಿರುವುದು ತಪ್ಪು ಎಂದು ಅಧಿಕಾರಿಗಳನ್ನ ವಾಪಸ್ ಕಳಿಸಿದರು.
ಕೆಐಎಡಿಬಿ ಅಧಿಕಾರಿಗಳನ್ನು ಕಾರಿನಿಂದ ಇಳಿಯಲು ಬಿಡದೆ ವಾಗ್ವಾದಕ್ಕೆ ಇಳಿದ ರೈತರು ಮಾತಿನ ಚಕಮಕಿ ನಡೆಸಿದಲ್ಲದೆ ಪ್ರಾಣ ಬಿಟ್ಟೆವು ಜಮೀನು ಕೊಡುವುದಿಲ್ಲ.ನಿಮ್ಮ ವಾಹನಗಳನ್ನು ಸುಟ್ಟುಹಾಕುತ್ತೇವೆ ಎಂದು ತೀವ್ರವಾಗಿ ಎಚ್ಚರಿಕೆನೀಡಿದ್ದಾರೆ.
ಯದರೂರು ಕಂದಾಯ ವೃತ್ತದಲ್ಲಿ ಕೈಗಾರಿಕ ವಲಯ
ಯದರೂರು ಕಂದಾಯ ವ್ಯಾಪ್ತಿಯಲ್ಲಿ ಕೈಗಾರಿಕಾ ವಲಯ ನಿರ್ಮಿಸಲು ಕೆಐಎಡಿಬಿKIADB Industrial Areas ಯದರೂರು ಹಾಗೂ ಸುತ್ತಮುತ್ತಲ ಗ್ರಾಮಗಳ ರೈತರ ಭೂಮಿ ವಶಪಡಿಸಿಕೊಂಡು ಹಾಗೂ ಅಭಿವೃದ್ಧಿ ಮಾಡುವ ಸಂಬಂಧ ನೋಟಿಫಿಕೇಶನ್ ಜಾರಿ ಮಾಡಿದ್ದು ಶ್ರೀನಿವಾಸಪುರದ ಉಪನೋಂಣಾಧಿಕಾರಿಗಳ ಕಚೇರಿಯಲ್ಲಿ ಜಮೀನುಗಳ ಪರಭಾರೆಯನ್ನು ಸ್ಥಗಿತಗೊಳಿಸಿ ಆದೇಶಿಸಿದೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



