ಶ್ರೀನಿವಾಸಪುರ:ಕ್ಷುಲ್ಲಕ ಕಾರಣಕ್ಕಾಗಿ ಯುವಕರ ನಡುವೆ ಬಡಿದಾಟವಾಗಿರುವ ಘಟನೆ ಶ್ರೀನಿವಾಸಪುರ ತಾಲ್ಲೂಕಿನ ಯಲ್ದೂರು ಹೋಬಳಿಯ ತರಕಾರಿ ರೈತರು ಹೆಚ್ಚಾಗಿ ಇರುವ ಶೀಗೆಹಳ್ಳಿ ಗ್ರಾಮದಲ್ಲಿ ನಡೆದಿರುತ್ತದೆ.ಯುವಕರ ನಡುವೆ ನಡೆದಂತ ಗಲಾಟೆಯಲ್ಲಿ ಮೂರು ಯುವಕರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಂದು ಶೀಗೆಹಳ್ಳಿ ಗ್ರಾಮದಲ್ಲಿ ಪವನ್ ಎಂಬುವರು ತಮ್ಮ ಸ್ನೇಹಿತ ಮಾತನಾಡಿಕೊಂಡು ಕುಳತಿದ್ದಾಗ ಅಲ್ಲೆ ಇದ್ದ ಬಾಬು ಎನ್ನುವರು ಜೋರಾಗಿ ಮಾತನಾಡ ಬೇಡವೆಂದು ರಗಳೆ ತಗೆದಿದ್ದಾನೆ ಇದಕ್ಕೆ ಪವನ್ ನಾನು ಮಾತನಾಡಿಕೊಳ್ಳುತ್ತಿದ್ದರೆ ನಿನಗೇನು ಅಬ್ಯಂತರ ಎಂದಿದ್ದಕ್ಕೆ ಬಾಬು ತೀವ್ರ ಸ್ಥಾಯಿಯಲ್ಲಿ ಗಲಾಟೆಮಾಡಿದ್ದಾನೆ ಈ ಸಂದರ್ಭದಲ್ಲಿ ಪವನ್ ಅಣ್ಣ ಮೋಹನ್ ಹಾಗು ರವಿ ಎಂಬುವರು ಗಲಾಟೆ ಬಿಡಿಸಲು ಮುಂದಾಗ ಬಾಬು ಗಲಾಟೆ ಬೀಡಿಸಲು ಬಂದ ಇಬ್ಬರ ಮೇಲು ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.ಗಲಾಟೆಯಲ್ಲಿ ಪವನ್ ಸೇರಿದಂತೆ ಮೂರು ಮಂದಿ ಗಾಯಗೊಂಡಿದ್ದಾರೆ.ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



