ಶ್ರೀನಿವಾಸಪುರ: ಅಂಬೇಡ್ಕರ್ ಪುತ್ತಳಿಗಳಿಗೆ ಮಾಲಾರ್ಪಣೆ ಮಾಡಿದರೆ ಸಾಲದು ಅವರ ಆಶಯಗಳಂತೆ ಸಮಾಜದಲ್ಲಿ ನಮ್ಮ ನಡವಳಿಕೆಗಳು ಇರಬೇಕು ಹಾಗು ಇಂದಿನ ಯುವ ಪೀಳಿಗೆ ಆಶಯಗಳನ್ನು ತಿಳಿಸುವಂತ ಪ್ರಯತ್ನ ಆಗಬೇಕಿದೆ ಎಂದು ಶಾಸಕ ರಮೇಶ್ ಕುಮಾರ್ ಹೇಳಿದರು ಅವರು, ತಾಲ್ಲೂಕು ಆಡಳಿತ ಆಯೋಜಿಸಿದ್ದ ಡಾ. ಅಂಬೇಡ್ಕರ್ ರವರ 130ನೇ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು, ಮಹಾನ್ ವ್ಯಕ್ತಿಗಳ ವಿಚಾರ ದಾರೆಗಳನ್ನು ತಿಳಿದುಕೊಳ್ಳಬೇಕು, ಅವರ ಆಶಯಗಳಂತೆ ನಮ್ಮ ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು, ಅಂಬೇಡ್ಕರ್ ಯಾರ ಬಳಿ ಕೈ ಚಾಚದವರಲ್ಲ ಇದಕ್ಕೆ ಉದಾರಣೆಯಾಗಿ ಅವರ ಪುತ್ರ ವಿಧಿವಶರಾದಾಗ, ಅಂತ್ಯಕ್ರಿಯೆ ಸಂದರ್ಭದಲ್ಲಿ ಅವರ ಅರ್ಥಿಕ ಸ್ಥಿತಿ ಶೋಚನೀಯವಾಗಿದ್ದರೂ ಅವರು ಸ್ವಾಭಿಮಾನ ಬಿಡದೆ ಕರ್ಮಗಳನ್ನು ತೀರಿಸಿದವರು. ಸಾಮಾಜಿಕ ಅಸಮಾನತೆಯ ವಿರುದ್ದ ಹೋರಾಡಿದ ಅಂಬೇಡ್ಕರ್, ಸಂವಿಧಾನದ ಮೂಲಕ ಪ್ರಜಾಪ್ರಭುತ್ವಕ್ಕೆ ರೂಪ ನೀಡಿದವರು ಅವರು ಹಚ್ಚಿದ ದೀಪದ ಬೆಳಕು ಇವತ್ತು ನಮಗೆಲ್ಲ ದಾರಿದೀಪವಾಗಿದೆ. ಎಂದರು.
ಕಾರ್ಯಕ್ರಮಕ್ಕೂ ಮುಂಚಿತವಾಗಿ ತಾಲೂಕು ಕಚೇರಿ ಮುಂಬಾಗದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಶಾಸಕ ಮಾಲಾರ್ಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಎಂ. ಶ್ರೀನಿವಾಸನ್, ತಾಲ್ಲೂಕು ದಂಡಾಧಿಕಾರಿ ಎಸ್.ಎಂ. ಶ್ರೀನಿವಾಸ್, ತಾ.ಪಂ ಇ.ಒ. ಎಸ್. ಆನಂದ್, ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಕೆ.ಕೆ ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಮೇಗೌಡ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸನ್, ಕೃಷಿಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ್ ಬಿ.ಸಿ.ಎಂ. ಇಲಾಖೆಯ ಅಧಿಕಾರಿ ಬೀರೇಗೌಡ, ವರ್ತನಹಳ್ಳಿ ವೆಂಕಟೇಶ್,ಹೊಗಳಗೆರೆ ಅಂಜಪ್ಪ, ರತ್ನಪ್ಪ ಇತರೆ ದಲಿತ ಸಂಘಟನೆಗಳ ಮುಖಂಡರು ಅಧಿಕಾರಿಗಳು ಉಪಸ್ಥತರಿದ್ದರು.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27