ಶ್ರೀನಿವಾಸಪುರ: ಅಂಬೇಡ್ಕರ್ ಪುತ್ತಳಿಗಳಿಗೆ ಮಾಲಾರ್ಪಣೆ ಮಾಡಿದರೆ ಸಾಲದು ಅವರ ಆಶಯಗಳಂತೆ ಸಮಾಜದಲ್ಲಿ ನಮ್ಮ ನಡವಳಿಕೆಗಳು ಇರಬೇಕು ಹಾಗು ಇಂದಿನ ಯುವ ಪೀಳಿಗೆ ಆಶಯಗಳನ್ನು ತಿಳಿಸುವಂತ ಪ್ರಯತ್ನ ಆಗಬೇಕಿದೆ ಎಂದು ಶಾಸಕ ರಮೇಶ್ ಕುಮಾರ್ ಹೇಳಿದರು ಅವರು, ತಾಲ್ಲೂಕು ಆಡಳಿತ ಆಯೋಜಿಸಿದ್ದ ಡಾ. ಅಂಬೇಡ್ಕರ್ ರವರ 130ನೇ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು, ಮಹಾನ್ ವ್ಯಕ್ತಿಗಳ ವಿಚಾರ ದಾರೆಗಳನ್ನು ತಿಳಿದುಕೊಳ್ಳಬೇಕು, ಅವರ ಆಶಯಗಳಂತೆ ನಮ್ಮ ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು, ಅಂಬೇಡ್ಕರ್ ಯಾರ ಬಳಿ ಕೈ ಚಾಚದವರಲ್ಲ ಇದಕ್ಕೆ ಉದಾರಣೆಯಾಗಿ ಅವರ ಪುತ್ರ ವಿಧಿವಶರಾದಾಗ, ಅಂತ್ಯಕ್ರಿಯೆ ಸಂದರ್ಭದಲ್ಲಿ ಅವರ ಅರ್ಥಿಕ ಸ್ಥಿತಿ ಶೋಚನೀಯವಾಗಿದ್ದರೂ ಅವರು ಸ್ವಾಭಿಮಾನ ಬಿಡದೆ ಕರ್ಮಗಳನ್ನು ತೀರಿಸಿದವರು. ಸಾಮಾಜಿಕ ಅಸಮಾನತೆಯ ವಿರುದ್ದ ಹೋರಾಡಿದ ಅಂಬೇಡ್ಕರ್, ಸಂವಿಧಾನದ ಮೂಲಕ ಪ್ರಜಾಪ್ರಭುತ್ವಕ್ಕೆ ರೂಪ ನೀಡಿದವರು ಅವರು ಹಚ್ಚಿದ ದೀಪದ ಬೆಳಕು ಇವತ್ತು ನಮಗೆಲ್ಲ ದಾರಿದೀಪವಾಗಿದೆ. ಎಂದರು.
ಕಾರ್ಯಕ್ರಮಕ್ಕೂ ಮುಂಚಿತವಾಗಿ ತಾಲೂಕು ಕಚೇರಿ ಮುಂಬಾಗದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಶಾಸಕ ಮಾಲಾರ್ಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಎಂ. ಶ್ರೀನಿವಾಸನ್, ತಾಲ್ಲೂಕು ದಂಡಾಧಿಕಾರಿ ಎಸ್.ಎಂ. ಶ್ರೀನಿವಾಸ್, ತಾ.ಪಂ ಇ.ಒ. ಎಸ್. ಆನಂದ್, ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಕೆ.ಕೆ ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಮೇಗೌಡ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸನ್, ಕೃಷಿಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ್ ಬಿ.ಸಿ.ಎಂ. ಇಲಾಖೆಯ ಅಧಿಕಾರಿ ಬೀರೇಗೌಡ, ವರ್ತನಹಳ್ಳಿ ವೆಂಕಟೇಶ್,ಹೊಗಳಗೆರೆ ಅಂಜಪ್ಪ, ರತ್ನಪ್ಪ ಇತರೆ ದಲಿತ ಸಂಘಟನೆಗಳ ಮುಖಂಡರು ಅಧಿಕಾರಿಗಳು ಉಪಸ್ಥತರಿದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



