ಚಿಂತಾಮಣಿ:ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಬರುವಂತ ಶೈಕ್ಷಣಿಕ ವರ್ಷಕ್ಕೆ ಸರ್ಕಾರಿ ಇಂಜನಿಯರಿಂಗ್ ಕಾಲೇಜು ಕಾರ್ಯರಂಭ ಆಗುವ ಸೂಚನೆ ಕಂಡುಬರುತ್ತಿದೆ.ರಾಜ್ಯದ ಉನ್ನತ ಶಿಕ್ಷಣ ಸಚಿವರು ಚಿಕ್ಕಬಳ್ಳಾಪುರ ಜಿಲ್ಲೆ ಉಸ್ತುವಾರಿ ಸಚಿವ ಹಾಗು ಚಿಂತಾಮಣಿ ಶಾಸಕ ಡಾ.ಎಂ.ಸಿ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಮಂಜೂರಾತಿ ಪ್ರಕ್ರಿಯೆ ಪೂರ್ಣಗೊಳಿಸಿದ್ದು ಆರಂಭಿಕವಾಗಿ ಖಾಸಗಿ ಕಟ್ಟಡದಲ್ಲಿ ಸರ್ಕಾರಿ ಇಂಜನಿಯರಿಂಗ್ ಕಾಲೇಜು ಆರಂಭವಾಗಲಿದೆ ಎನ್ನುವ ಮಾತು ದಟ್ಟವಾಗಿ ಕೇಳಿಬರುತ್ತಿದ್ದು ಮುಂದಿನ ಜುನ್ ಜುಲೈ ತಿಂಗಳಲ್ಲಿ ದಾಖಲಾತಿಗಳು ಪ್ರಾರಂಭವಾಗಿ ದಿನಗಳಲ್ಲಿ ಕಾಲೇಜಿನ ತರಗತಿಗಳು ಶುರುವಾಗಲಿದೆ ಎನ್ನವಮಾತು ಕೇಳಿಬರುತ್ತಿದೆ.
ಸಚಿವ ಡಾ.ಸುಧಾಕರ್ ಹೇಳಿರುವಂತೆ ಚಿಂತಾಮಣಿ ನಗರದ ಬೆಂಗಳೂರು ರಸ್ತೆಯಲ್ಲಿ ಯಾದವ ಹಾಸ್ಟಲ್ ಬಳಿ ಸುಮಾರು ಹತ್ತು ಎಕರೆ ಜಾಗವನ್ನು ಇಂಜನಿಯರಿಂಗ್ ಕಾಲೇಜು ನಿರ್ಮಿಸಲು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗೆ ಮಂಜೂರು ಮಾಡಿದ್ದು ಆರಂಭಿಕ 70 ಕೋಟಿ ಅಂದಾಜು ವೆಚ್ಚದಲ್ಲಿ ಎಂಜಿನಿಯರಿಂಗ್ ಕಾಲೇಜನ್ನು ನಿರ್ಮಿಸುವ ಬಗ್ಗೆ ತಿಳಿಸಿದ್ದಾರೆ, ಕಾಲೇಜು ಶಿಕ್ಷಣಕ್ಕೆ ಹೆಚ್ಚಿನ ಅನುದಾನ ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಅದರಲ್ಲೂ ವೃತ್ತಿ ಪರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಿದೆ ಎಂದಿರುತ್ತಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27