ಚಿಂತಾಮಣಿ:ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಬರುವಂತ ಶೈಕ್ಷಣಿಕ ವರ್ಷಕ್ಕೆ ಸರ್ಕಾರಿ ಇಂಜನಿಯರಿಂಗ್ ಕಾಲೇಜು ಕಾರ್ಯರಂಭ ಆಗುವ ಸೂಚನೆ ಕಂಡುಬರುತ್ತಿದೆ.ರಾಜ್ಯದ ಉನ್ನತ ಶಿಕ್ಷಣ ಸಚಿವರು ಚಿಕ್ಕಬಳ್ಳಾಪುರ ಜಿಲ್ಲೆ ಉಸ್ತುವಾರಿ ಸಚಿವ ಹಾಗು ಚಿಂತಾಮಣಿ ಶಾಸಕ ಡಾ.ಎಂ.ಸಿ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಮಂಜೂರಾತಿ ಪ್ರಕ್ರಿಯೆ ಪೂರ್ಣಗೊಳಿಸಿದ್ದು ಆರಂಭಿಕವಾಗಿ ಖಾಸಗಿ ಕಟ್ಟಡದಲ್ಲಿ ಸರ್ಕಾರಿ ಇಂಜನಿಯರಿಂಗ್ ಕಾಲೇಜು ಆರಂಭವಾಗಲಿದೆ ಎನ್ನುವ ಮಾತು ದಟ್ಟವಾಗಿ ಕೇಳಿಬರುತ್ತಿದ್ದು ಮುಂದಿನ ಜುನ್ ಜುಲೈ ತಿಂಗಳಲ್ಲಿ ದಾಖಲಾತಿಗಳು ಪ್ರಾರಂಭವಾಗಿ ದಿನಗಳಲ್ಲಿ ಕಾಲೇಜಿನ ತರಗತಿಗಳು ಶುರುವಾಗಲಿದೆ ಎನ್ನವಮಾತು ಕೇಳಿಬರುತ್ತಿದೆ.
ಸಚಿವ ಡಾ.ಸುಧಾಕರ್ ಹೇಳಿರುವಂತೆ ಚಿಂತಾಮಣಿ ನಗರದ ಬೆಂಗಳೂರು ರಸ್ತೆಯಲ್ಲಿ ಯಾದವ ಹಾಸ್ಟಲ್ ಬಳಿ ಸುಮಾರು ಹತ್ತು ಎಕರೆ ಜಾಗವನ್ನು ಇಂಜನಿಯರಿಂಗ್ ಕಾಲೇಜು ನಿರ್ಮಿಸಲು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗೆ ಮಂಜೂರು ಮಾಡಿದ್ದು ಆರಂಭಿಕ 70 ಕೋಟಿ ಅಂದಾಜು ವೆಚ್ಚದಲ್ಲಿ ಎಂಜಿನಿಯರಿಂಗ್ ಕಾಲೇಜನ್ನು ನಿರ್ಮಿಸುವ ಬಗ್ಗೆ ತಿಳಿಸಿದ್ದಾರೆ, ಕಾಲೇಜು ಶಿಕ್ಷಣಕ್ಕೆ ಹೆಚ್ಚಿನ ಅನುದಾನ ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಅದರಲ್ಲೂ ವೃತ್ತಿ ಪರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಿದೆ ಎಂದಿರುತ್ತಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



