ಶ್ರೀನಿವಾಸಪುರ: ತಾಲೂಕಿನಲ್ಲಿ ಕಳೆದ ನಾಲ್ಕೈದು ದಶಕಗಳಿಂದ ಆಡಳಿತ ನಡೆಸಿದಂತ ಇಬ್ಬರು ಮುಖಂದರು ತಾಲ್ಲೂಕಿನ ಅಭಿವೃದ್ಧಿ ಮರೆತು ರಾಜಕೀಯ ಅಧಿಕಾರವನ್ನು ತಮ್ಮ ಸ್ವಂತ ಅನಕೂಲಕ್ಕಾಗಿ ಬಳಸಿಕೊಂಡಿದ್ದಾರೆ ಎಂದು ವಿಧಾನಸಭಾ ಕ್ಷೇತ್ರದ ಮುಖಂಡ ಗುಂಜೂರು ಶ್ರೀನಿವಾಸ ರೆಡ್ಡಿ ಆರೋಪಿಸಿದರು.
ಅವರು ಯಲ್ದೂರು ಗ್ರಾಮದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳನ್ನು ತೊರೆದು ತಮ್ಮ ಬಣಕ್ಕೆ ಸೇರ್ಪಡೆಯಾದ ಕಾರ್ಯಕರ್ತರನ್ನು ಬರಮಾಡಿಕೊಂಡು ಮಾತನಾಡಿ ಒಂದು ವರ್ಷದ ಅವಧಿಯಲ್ಲಿ ತಾಲ್ಲೂಕಿನಲ್ಲಿ ನಮ್ಮ ಸೇವಾ ಕಾರ್ಯಕ್ರಮಗಳು ಮತ್ತು ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ತಮ್ಮ ಬಣಕ್ಕೆ ಬೇರೆ ಬೇರೆ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಸೇರ್ಪಡೆಯಾಗುತ್ತಿದ್ದು ಇದು ತಾಲೂಕಿನ ರಾಜಕೀಯ ಧ್ರುವೀಕರಣಕ್ಕೆ ಮುನ್ಸೂಚನೆ ಎಂದರು.
ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಧ್ಯೇಯವಾಗಿಟ್ಟುಕೊಂಡು ತಾಲ್ಲೂಕಿನ ರಾಜಕೀಯಕ್ಕೆ ಬಂದಿರುವೆ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಮಾತೇ ಇಲ್ಲ, ತಾಲ್ಲೂಕಿನ ಜನತೆ ನೀಡಿದ ಅಧಿಕಾರವನ್ನು ದುರುಪಯೋಗ ಮಾಡಿಕೊಂಡವರನ್ನು ಈ ಚುನಾವಣೆಯಲ್ಲಿ ಬುದ್ದಿಕಲಿಸುವಂತೆ ಹೇಳಿದರು.
ಸಮಾರಂಭದಲ್ಲಿ ಯಲ್ದೂರು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮುನಿಯಪ್ಪ, ಮಾಜಿ ಉಪಾಧ್ಯಕ್ಷ ಆನಂದ್, ಮಾಜಿ ಸದಸ್ಯ ಹರಿನಾಥ್, ಮುತ್ತಕಪಲ್ಲಿ ಪಂಚಾಯಿತಿ ಮಾಜಿ ಅಧ್ಯಕ್ಷ ಹನುಮಂತ ರೆಡ್ಡಿ ಮತ್ತು ಇತರೆ ಪಕ್ಷಗಳ ಹಲವಾರು ಕಾರ್ಯಕರ್ತರು ಗುಂಜೂರು ಶ್ರೀನಿವಾಸ ರೆಡ್ಡಿ ಬಣಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅತ್ತಿಕುಂಟೆ ರಾಜಶೇಖರ ರೆಡ್ಡಿ, ಪುರಸಭೆ ಮಾಜಿ ಅಧ್ಯಕ್ಷ ಪ್ರಕಾಶ್, ಆಚಂಪಲ್ಲಿ ವೆಂಕರವಣಪ್ಪ, ನವಕೋಟಿ ಶ್ರೀರಾಮುಲು, ಅರವಿಂದ, ನಂದಕುಮಾರ್, ಮುರಳಿ, ಎಸ್.ಎಮ್.ರವಿಚಂದ್ರ, ಗೌರೀಶ, ಷಮೀವುಲ್ಲಾ, ಮಹಮ್ಮದ್ ಆಲಿ ಇನ್ನೂ ಮುಂತಾದವರು ಇದ್ದರು.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Sunday, June 15