ಶ್ರೀನಿವಾಸಪುರ: ತಾಲೂಕಿನಲ್ಲಿ ಹೊಸ ರಾಜಕಿಯ ಭಾಷ್ಯ ಬರೆಯಲು ಮುಂದಾಗಿ ಕಳೆದ ಒಂದು ವರ್ಷದಿಂದ ಪಕ್ಷೇತರ ಅಭ್ಯರ್ಥಿಯಂದು ಕ್ಷೇತ್ರದಾದ್ಯಂತ ಸುತ್ತಾಡಿ ಪರಿಚಿತರಾಗಿರುವ ಗುಂಜೂರು ಶ್ರೀನಿವಾಸರೆಡ್ದಿ 2023ರ ವಿಧಾನಸಭಾ ಘೋಷಣೆಯಾದ ಮರು ದಿನವೆ ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ.
ಗುಂಜೂರು ಶ್ರೀನಿವಾಸರೆಡ್ದಿ ಅವರ ಆಪ್ತ ವಲಯದ ಮುಖಂಡರು ಹೇಳುವಂತೆ ದಿನಾಂಕ 30/3/23 ಗುರುವಾರ ಶ್ರೀರಾಮನವಮಿಯಂದು ಶ್ರೀನಿವಾಸರೆಡ್ದಿ ಬಿಜೆಪಿಗೆ(BJP) ಸೇರಲಿದ್ದಾರಂತೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವುದಾಗಿ ಹೇಳುತ್ತಾರೆ.
ಬೆಂಗಳೂರು ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನಾಥ ಭವನದಲ್ಲಿ ಗುರುವಾರ ಮಧ್ಯಾಹಃ ವಿಧಾನಪರಿಷತ್ ಮುಖ್ಯ ಸಚೇತಕ ವೈ.ಎ.ನಾರಯಣಸ್ವಾಮಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ತಮ್ಮ ಬೆಂಬಲಿಗರನ್ನು ಬೆಂಗಳೂರಿಗೆ ಕರೆದೊಯ್ಯಲು ಗುಂಜೂರು ಶ್ರೀನಿವಾಸರೆಡ್ದಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಬಸ್ಸುಗಳನ್ನು ಮತ್ತು ಟಾಟಾ ಸುಮೊಗಳನ್ನು ಬಾಡಿಗೆಗೆ ನಿಗದಿಪಡೆಸಿರುವುದಾಗಿ ಹೇಳಲಾಗುತ್ತಿದೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Tuesday, June 17