ನ್ಯೂಜ್ ಡೆಸ್ಕ್: ಬಂಗಾಳ ಕೊಲ್ಲಿಯಲ್ಲಿ ಹವಾಮಾನ ವೈಪರೀತ್ಯದಿಂದ ವಾಯುಭಾರ ಕುಸಿತವಾಗಿ ಏರ್ಪಡುವ ವಾತವರಣದ ಹಿನ್ನಲೆಯಲ್ಲಿ ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಪುದುಚೇರಿಯಲ್ಲಿ ನವೆಂಬರ್ 14ರ ವರೆಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ ಕೆಲವೊಂದು ಕಡೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.ಕರ್ನಾಟಕದ ಕೋಲಾರ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹೇಳಿದೆ.
ಕರ್ನಾಟಕದ ಕೋಲಾರ ಜಿಲ್ಲೆ ಸೇರಿದಂತೆ ಚಿಕ್ಕಬಳ್ಳಾಪುರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಆಂಧ್ರದ ಅನ್ನಮಯ್ಯ,ಚಿತ್ತೂರು ಮತ್ತು ತಿರುಪತಿ,ಸೀಮಾ,ನೆಲ್ಲೂರು ಹಾಗು ಕಾಕಿನಾಡ ಜಿಲ್ಲೆಗಳಲ್ಲಿ ನಾಳೆಯಿಂದಲೆ ಮಳೆಯಾಗಲಿದೆ ಎಂದು ತಿಳಿಸಿದೆ. ಮಳೆಯ ಹಿನ್ನೆಲೆಯಲ್ಲಿ ಜನರು ಜಾಗೃತರಾಗಿರಲು ಅಲ್ಲಿನ ಸರ್ಕಾರ ಸೂಚಿಸಿದೆ.
ಕರ್ನಾಟಕದಲ್ಲಿ ತಾಪಮಾನ ಕಡಿಮೆಯಾದಂತೆ ಬೆಳಗ್ಗೆ ಮತ್ತು ಸಂಜೆ ಚಳಿ ಹೆಚ್ಚಾಗಿದ್ದು ನವೆಂಬರ್ 21 ರ ನಂತರ ದಟ್ಟವಾದ ಮಂಜಿನಿಂದಾಗಿ ತಾಪಮಾನವು ಇನ್ನಷ್ಟು ಕಡಿಮೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



