ಶ್ರೀನಿವಾಸಪುರ: ಬಿರುಗಾಳಿ ಸಮೇತದ ಮಳೆಯ ಆರ್ಭಟಕ್ಕೆ ಶ್ರೀನಿವಾಸಪುರ ಭಾಗದ ಜೀವನಾಡಿ ಮಾವಿನಕಾಯಿಗಳು ನೆಲದ ಪಾಲಾಗಿದೆ ಸುಮಾರು ಒಂದು ಗಂಟೆಯ ಕಾಲ ಬೀಸಿದಂತ ಬಿರುಗಾಳಿಗೆ ಬಾರಿಗಾತ್ರದ ಮರಗಳು ನೆಲಕ್ಕೂರಳಿದೆ.
ಭಾನುವಾರ ಸಂಜೆ ಬಿರುಸಾದ ರಕ್ಕಸ ಗಾಳಿ ಮಳೆಯಿಂದ ಇಲ್ಲಿನ ರೈತಾಪಿ ಜನರ ವಾರ್ಷಿಕ ಜೀವನಾಡಿ ಬೆಳೆಯಾದ ಮಾವು ಸಂಪೂರ್ಣವಾಗಿ ನೆಲಕಚ್ಚಿದೆ ಗಂಟೆಗೆ ಅಂದಾಜು 30-40 ಕೀ.ಮಿ ವೇಗದಲ್ಲಿ ಬೀಸಿದಂತ ಗಾಳಿಯ ರಭಸಕ್ಕೆ ವಿಶೇಷವಾಗಿ ರೋಣೂರು ಹೋಬಳಿ ಕಸಬಾ ಹಾಗು ಯಲ್ದೂರು ಹೋಬಳಿಯ ಭಾಗದಲ್ಲಿ ಹೆಚ್ಚು ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.ಮಾವು ಬೆಳೆಯ ಜೊತೆಗೆ ತೋಟಗಾರಿಕೆ ಬೆಳೆಗಳಾದ ಟಮ್ಯಾಟೊ ಸೇರಿದಂತೆ ಇತರೆ ಬೆಳೆಗಳು ಹಾಳಾಗಿದೆ.ಶೇಡ್ ಮನೆಗಳ ತಗಡಿನ ರೇಖುಗಳು ಗಾಳಿಯ ಆರ್ಭಟಕ್ಕೆ ಹಾರಿಹೋಗಿದೆ.
ಇದ-ಬದ್ದ ಬೆಳೆಯೂ ಹೋಯಿತು
ಕಳೆದ ಎರಡು ಮೂರು ತಿಂಗಳ ಹಿಂದೆ ಬಿದ್ದಂತ ಆಲಿಕಲ್ಲು ಮಳೆಯಿಂದ ಶೇ%60 ರಷ್ಟು ಮಾವು ಬೆಳೆ ಹೂ ಹಾಗು ಪಿಂದೆ ಹಂತದಲ್ಲಿಯೇ ಹಾಳಾಗಿತ್ತು ಇದ್ದ 30-40 ಭಾಗದಷ್ಟು ಬೆಳೆ ಇನ್ನೇನು ಹತ್ತು ಹದಿನೈದು ದಿನಗಳಲ್ಲಿ ಕೊಯ್ಲು ಮಾಡಬೇಕಿದ್ದ ಮಾವು ಬೆಳೆ ಗಾಳಿಯ ರಭಸಕ್ಕೆ ಹಾಗು ಕೆಲವೊಂದು ಗ್ರಾಮಗಳಲ್ಲಿ ಆಲಿಕಲ್ಲು ಬಿದ್ದು ನೆಲದ ಪಾಲಾಗಿದೆ ಎಂದು ರೈತ ಸೂರ್ಯನಾರಯಣ ಹೇಳುತ್ತಾರೆ
ಪರಿಹಾರಕ್ಕೆ ಅಗ್ರಹ
ಇಂದು ಬಿದ್ದ ಬಿರುಗಾಳಿ ಸಮೇತ ಮಳೆಯಿಂದ ಮಾವು ಬೆಳೆ ನಷ್ಟಕ್ಕೆ ಒಳಗಾಗಿದ್ದು ಮಾವುಬೆಳೆಗಾರರಿಗೆ ಸರ್ಕಾರ ತೋಟಗಾರಿಕೆ ಹಾಗು ಕಂದಾಯ ಇಲಾಖೆ ಜಂಟಿ ಸರ್ವೆ ನಡೆಸಿ ಬೆಳೆಹಾನಿ ಪರಿಹಾರ ಕೊಡಬೇಕು ಎಂದು ಮಾವು ಬೆಳೆಗಾರ ಸಂಘದ ಜಿಲ್ಲಾಧ್ಯಕ್ಷ ನಿಲಟೂರುಚಿನ್ನಪ್ಪರೆಡ್ಡಿ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ನವೀನ್ ಕುಮಾರ್ ಸರ್ಕಾರವನ್ನು ಹಾಗು ಇದಕ್ಕೆ ಸ್ಥಳೀಯ ಶಾಸಕರು ವಿಧಾನಪರಿಷತ್ ಸದಸ್ಯರು ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27