ಶ್ರೀನಿವಾಸಪುರ: ಬಿರುಗಾಳಿ ಸಮೇತದ ಮಳೆಯ ಆರ್ಭಟಕ್ಕೆ ಶ್ರೀನಿವಾಸಪುರ ಭಾಗದ ಜೀವನಾಡಿ ಮಾವಿನಕಾಯಿಗಳು ನೆಲದ ಪಾಲಾಗಿದೆ ಸುಮಾರು ಒಂದು ಗಂಟೆಯ ಕಾಲ ಬೀಸಿದಂತ ಬಿರುಗಾಳಿಗೆ ಬಾರಿಗಾತ್ರದ ಮರಗಳು ನೆಲಕ್ಕೂರಳಿದೆ.
ಭಾನುವಾರ ಸಂಜೆ ಬಿರುಸಾದ ರಕ್ಕಸ ಗಾಳಿ ಮಳೆಯಿಂದ ಇಲ್ಲಿನ ರೈತಾಪಿ ಜನರ ವಾರ್ಷಿಕ ಜೀವನಾಡಿ ಬೆಳೆಯಾದ ಮಾವು ಸಂಪೂರ್ಣವಾಗಿ ನೆಲಕಚ್ಚಿದೆ ಗಂಟೆಗೆ ಅಂದಾಜು 30-40 ಕೀ.ಮಿ ವೇಗದಲ್ಲಿ ಬೀಸಿದಂತ ಗಾಳಿಯ ರಭಸಕ್ಕೆ ವಿಶೇಷವಾಗಿ ರೋಣೂರು ಹೋಬಳಿ ಕಸಬಾ ಹಾಗು ಯಲ್ದೂರು ಹೋಬಳಿಯ ಭಾಗದಲ್ಲಿ ಹೆಚ್ಚು ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.ಮಾವು ಬೆಳೆಯ ಜೊತೆಗೆ ತೋಟಗಾರಿಕೆ ಬೆಳೆಗಳಾದ ಟಮ್ಯಾಟೊ ಸೇರಿದಂತೆ ಇತರೆ ಬೆಳೆಗಳು ಹಾಳಾಗಿದೆ.ಶೇಡ್ ಮನೆಗಳ ತಗಡಿನ ರೇಖುಗಳು ಗಾಳಿಯ ಆರ್ಭಟಕ್ಕೆ ಹಾರಿಹೋಗಿದೆ.
ಇದ-ಬದ್ದ ಬೆಳೆಯೂ ಹೋಯಿತು
ಕಳೆದ ಎರಡು ಮೂರು ತಿಂಗಳ ಹಿಂದೆ ಬಿದ್ದಂತ ಆಲಿಕಲ್ಲು ಮಳೆಯಿಂದ ಶೇ%60 ರಷ್ಟು ಮಾವು ಬೆಳೆ ಹೂ ಹಾಗು ಪಿಂದೆ ಹಂತದಲ್ಲಿಯೇ ಹಾಳಾಗಿತ್ತು ಇದ್ದ 30-40 ಭಾಗದಷ್ಟು ಬೆಳೆ ಇನ್ನೇನು ಹತ್ತು ಹದಿನೈದು ದಿನಗಳಲ್ಲಿ ಕೊಯ್ಲು ಮಾಡಬೇಕಿದ್ದ ಮಾವು ಬೆಳೆ ಗಾಳಿಯ ರಭಸಕ್ಕೆ ಹಾಗು ಕೆಲವೊಂದು ಗ್ರಾಮಗಳಲ್ಲಿ ಆಲಿಕಲ್ಲು ಬಿದ್ದು ನೆಲದ ಪಾಲಾಗಿದೆ ಎಂದು ರೈತ ಸೂರ್ಯನಾರಯಣ ಹೇಳುತ್ತಾರೆ
ಪರಿಹಾರಕ್ಕೆ ಅಗ್ರಹ
ಇಂದು ಬಿದ್ದ ಬಿರುಗಾಳಿ ಸಮೇತ ಮಳೆಯಿಂದ ಮಾವು ಬೆಳೆ ನಷ್ಟಕ್ಕೆ ಒಳಗಾಗಿದ್ದು ಮಾವುಬೆಳೆಗಾರರಿಗೆ ಸರ್ಕಾರ ತೋಟಗಾರಿಕೆ ಹಾಗು ಕಂದಾಯ ಇಲಾಖೆ ಜಂಟಿ ಸರ್ವೆ ನಡೆಸಿ ಬೆಳೆಹಾನಿ ಪರಿಹಾರ ಕೊಡಬೇಕು ಎಂದು ಮಾವು ಬೆಳೆಗಾರ ಸಂಘದ ಜಿಲ್ಲಾಧ್ಯಕ್ಷ ನಿಲಟೂರುಚಿನ್ನಪ್ಪರೆಡ್ಡಿ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ನವೀನ್ ಕುಮಾರ್ ಸರ್ಕಾರವನ್ನು ಹಾಗು ಇದಕ್ಕೆ ಸ್ಥಳೀಯ ಶಾಸಕರು ವಿಧಾನಪರಿಷತ್ ಸದಸ್ಯರು ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದಾರೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Sunday, June 15