ಶ್ರೀನಿವಾಸಪುರ: ಬಿರುಗಾಳಿ ಸಮೇತದ ಮಳೆಯ ಆರ್ಭಟಕ್ಕೆ ಶ್ರೀನಿವಾಸಪುರ ಭಾಗದ ಜೀವನಾಡಿ ಮಾವಿನಕಾಯಿಗಳು ನೆಲದ ಪಾಲಾಗಿದೆ ಸುಮಾರು ಒಂದು ಗಂಟೆಯ ಕಾಲ ಬೀಸಿದಂತ ಬಿರುಗಾಳಿಗೆ ಬಾರಿಗಾತ್ರದ ಮರಗಳು ನೆಲಕ್ಕೂರಳಿದೆ.
ಭಾನುವಾರ ಸಂಜೆ ಬಿರುಸಾದ ರಕ್ಕಸ ಗಾಳಿ ಮಳೆಯಿಂದ ಇಲ್ಲಿನ ರೈತಾಪಿ ಜನರ ವಾರ್ಷಿಕ ಜೀವನಾಡಿ ಬೆಳೆಯಾದ ಮಾವು ಸಂಪೂರ್ಣವಾಗಿ ನೆಲಕಚ್ಚಿದೆ ಗಂಟೆಗೆ ಅಂದಾಜು 30-40 ಕೀ.ಮಿ ವೇಗದಲ್ಲಿ ಬೀಸಿದಂತ ಗಾಳಿಯ ರಭಸಕ್ಕೆ ವಿಶೇಷವಾಗಿ ರೋಣೂರು ಹೋಬಳಿ ಕಸಬಾ ಹಾಗು ಯಲ್ದೂರು ಹೋಬಳಿಯ ಭಾಗದಲ್ಲಿ ಹೆಚ್ಚು ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.ಮಾವು ಬೆಳೆಯ ಜೊತೆಗೆ ತೋಟಗಾರಿಕೆ ಬೆಳೆಗಳಾದ ಟಮ್ಯಾಟೊ ಸೇರಿದಂತೆ ಇತರೆ ಬೆಳೆಗಳು ಹಾಳಾಗಿದೆ.ಶೇಡ್ ಮನೆಗಳ ತಗಡಿನ ರೇಖುಗಳು ಗಾಳಿಯ ಆರ್ಭಟಕ್ಕೆ ಹಾರಿಹೋಗಿದೆ.
ಇದ-ಬದ್ದ ಬೆಳೆಯೂ ಹೋಯಿತು
ಕಳೆದ ಎರಡು ಮೂರು ತಿಂಗಳ ಹಿಂದೆ ಬಿದ್ದಂತ ಆಲಿಕಲ್ಲು ಮಳೆಯಿಂದ ಶೇ%60 ರಷ್ಟು ಮಾವು ಬೆಳೆ ಹೂ ಹಾಗು ಪಿಂದೆ ಹಂತದಲ್ಲಿಯೇ ಹಾಳಾಗಿತ್ತು ಇದ್ದ 30-40 ಭಾಗದಷ್ಟು ಬೆಳೆ ಇನ್ನೇನು ಹತ್ತು ಹದಿನೈದು ದಿನಗಳಲ್ಲಿ ಕೊಯ್ಲು ಮಾಡಬೇಕಿದ್ದ ಮಾವು ಬೆಳೆ ಗಾಳಿಯ ರಭಸಕ್ಕೆ ಹಾಗು ಕೆಲವೊಂದು ಗ್ರಾಮಗಳಲ್ಲಿ ಆಲಿಕಲ್ಲು ಬಿದ್ದು ನೆಲದ ಪಾಲಾಗಿದೆ ಎಂದು ರೈತ ಸೂರ್ಯನಾರಯಣ ಹೇಳುತ್ತಾರೆ
ಪರಿಹಾರಕ್ಕೆ ಅಗ್ರಹ
ಇಂದು ಬಿದ್ದ ಬಿರುಗಾಳಿ ಸಮೇತ ಮಳೆಯಿಂದ ಮಾವು ಬೆಳೆ ನಷ್ಟಕ್ಕೆ ಒಳಗಾಗಿದ್ದು ಮಾವುಬೆಳೆಗಾರರಿಗೆ ಸರ್ಕಾರ ತೋಟಗಾರಿಕೆ ಹಾಗು ಕಂದಾಯ ಇಲಾಖೆ ಜಂಟಿ ಸರ್ವೆ ನಡೆಸಿ ಬೆಳೆಹಾನಿ ಪರಿಹಾರ ಕೊಡಬೇಕು ಎಂದು ಮಾವು ಬೆಳೆಗಾರ ಸಂಘದ ಜಿಲ್ಲಾಧ್ಯಕ್ಷ ನಿಲಟೂರುಚಿನ್ನಪ್ಪರೆಡ್ಡಿ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ನವೀನ್ ಕುಮಾರ್ ಸರ್ಕಾರವನ್ನು ಹಾಗು ಇದಕ್ಕೆ ಸ್ಥಳೀಯ ಶಾಸಕರು ವಿಧಾನಪರಿಷತ್ ಸದಸ್ಯರು ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



