ಶ್ರೀನಿವಾಸಪುರ:ದನ ಕಾಯುತ್ತಿದ್ದ ವ್ಯಕ್ತಿಯ ಮೇಲೆ ಜೇನು ನೋಣ ದಾಳಿ ಮಾಡಿದ್ದು ವ್ಯಕ್ತಿ ತೀವ್ರವಾಗಿ ಅಸ್ವಸ್ಥಗೊಂಡು ಶ್ರೀನಿವಾಸಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಇಂದು ನಡೆದಿದೆ.
ಜೇನು ನೋಣ ದಾಳಿಯಿಂದ ಗಾಯಗೊಂಡು ಅಸ್ವಸ್ಥನಾಗಿರುವ ವ್ಯಕ್ತಿಯನ್ನು ತಾಲೂಕಿನ ಸೋಮಯಾಜಹಳ್ಳಿ ಪಂಚಾಯಿತಿಯ ಕೂಳಗುರ್ಕಿ ಗ್ರಾಮದ ವೆಂಕಟರಮಣಪ್ಪ ಎಂದು ಗುರುತಿಸಲಾಗಿದೆ.
ಎಂದಿನಂತೆ ಧನ ಕಾಯಲು ಜಾನುವಾರುಗಳನ್ನು ಹೊಡೆದುಕೊಂಡು ಊರಿನಿಂದ ಆಚೆ ಹೋಗಿರುವ ವೆಂಕಟರಮಣಪ್ಪ ಜಾನುವಾರುಗಳನ್ನು ಮೇಯಲು ಬಿಟ್ಟು ಮರದಡಿ ನಿದ್ರೆಗೆ ಜಾರಿದ್ದಾನೆ ನಂತರದಲ್ಲಿ ಏಕಾಏಕಿ ಅವರ ಮೇಲೆ ಜೇನುನೊಣಗಳ ಗುಂಪು ದಾಳಿ ನಡೆಸಿ ಕಚ್ಚಿದ್ದು ತೀವ್ರ ಅಸ್ವಸ್ಥಗೊಂಡಿದ್ದಾರೆ ಅವರನ್ನು ಚಿಕಿತ್ಸೆಗಾಗಿ ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿರುವುದಾಗಿ ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ.ಶ್ರೀನಿವಾಸಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



