ಶ್ರೀನಿವಾಸಪುರ:ಕೆ.ಎಸ್,ಎ.ಎಸ್ ಉಪ ನಿರ್ದೇಶಕರು ರಾಜ್ಯ ಲೆಕ್ಕ ಪತ್ರ ಇಲಾಖೆ ಹಾಲಿ ಕೋಲಾರ ಜಿಲ್ಲಾ ಪಂಚಾಯಿತಿಯ ಲೆಕ್ಕಾಧಿಕಾರಿ ಆಗಿರುವ ಬಿ.ಎಸ್.ಗಂಗಾಧರ್ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ. ಬೆಂಗಳುರು ಕೇಂದ್ರ ವಿಶ್ವ ವಿದ್ಯಾಲಯದ ವಾಣಿಜ್ಯ ವಿಭಾಗದ ಮಾಜಿ ಡಿನ್ ಮತ್ತು ಅಧ್ಯಕ್ಷರು ಅದ ಡಾ.ಎಂ.ಮುನಿರಾಜು ಅವರ ಮಾರ್ಗದರ್ಶನದಲ್ಲಿ ವಾಣಿಜ್ಯ ವಿಭಾಗದಲ್ಲಿ ಲೆಕ್ಕಪತ್ರಗಳು ಮತ್ತು ಲೆಕ್ಕ ಪರಿಶೋಧನೆ ಕುರಿತಾಗಿ ಮಹಾಪ್ರಭಂದನೆ ಮಂಡನೆಗೆ ಬೆಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ನೀಡಿ ಗೌರವಿಸಿದೆ.ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯ ಉಪ ನಿರ್ದೇಸಕರಾಗಿರುವ ಗಂಗಾಧರ್ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು ಹೋಬಳಿಯ ಬಸನಪಲ್ಲಿ ಎಂಬ ಕುಗ್ರಾಮದ ರೈತಾಪಿ ಕುಟುಂಬದ ಕುಡಿ ಗ್ರಾಮದ ಸುಬ್ಬನ್ನ ಮತ್ತು ಮಲ್ಲಮ್ಮ ಕೃಷಿಕ ದಂಪತಿಯ ತೃತೀಯ ಪುತ್ರ ಆಗಿರುವ ಈಗಲೂ ಆಂಧ್ರ ಗಂಡಿಯಂಚಿನ ಗ್ರಾಮ ಬಸನಪಲ್ಲಿಯಿಂದ ತಾವು ಅಧಿಕಾರಿಯಾಗಿರುವ ತಮ್ಮ ಕಾರ್ಯಕ್ಷೇತ್ರದ ಕೋಲಾರ ಜಿಲ್ಲಾ ಪಂಚಾಯಿತಿ ಕಚೇರಿಗೆ ಹೋಗಿಬರುತ್ತಾರೆ ರಜಾ ದಿನಗಳಲ್ಲಿ ತಮ್ಮ ಜಮೀನಿನಲ್ಲಿ ಕುಟುಂದ ಸದಸ್ಯರೊಂದಿಗೆ ದಿನ ಪೂರ್ತಿ ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತಾರೆ.
ಗಂಗಾಧರ್ ಕೆ.ಎಸ್,ಎ.ಎಸ್ ಅಧಿಕಾರಿಯಾಗಿ ವ್ಯಾಸಾಂಗದ ಕುರಿತಾಗಿ ನಿರಂತರವಾಗಿ ಅಧ್ಯಯನದಲ್ಲಿ ತೊಡಗಿಸಿಕೊಂಡಿದ್ದಾರೆ.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27