ಶ್ರೀನಿವಾಸಪುರ:ಕೆ.ಎಸ್,ಎ.ಎಸ್ ಉಪ ನಿರ್ದೇಶಕರು ರಾಜ್ಯ ಲೆಕ್ಕ ಪತ್ರ ಇಲಾಖೆ ಹಾಲಿ ಕೋಲಾರ ಜಿಲ್ಲಾ ಪಂಚಾಯಿತಿಯ ಲೆಕ್ಕಾಧಿಕಾರಿ ಆಗಿರುವ ಬಿ.ಎಸ್.ಗಂಗಾಧರ್ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ. ಬೆಂಗಳುರು ಕೇಂದ್ರ ವಿಶ್ವ ವಿದ್ಯಾಲಯದ ವಾಣಿಜ್ಯ ವಿಭಾಗದ ಮಾಜಿ ಡಿನ್ ಮತ್ತು ಅಧ್ಯಕ್ಷರು ಅದ ಡಾ.ಎಂ.ಮುನಿರಾಜು ಅವರ ಮಾರ್ಗದರ್ಶನದಲ್ಲಿ ವಾಣಿಜ್ಯ ವಿಭಾಗದಲ್ಲಿ ಲೆಕ್ಕಪತ್ರಗಳು ಮತ್ತು ಲೆಕ್ಕ ಪರಿಶೋಧನೆ ಕುರಿತಾಗಿ ಮಹಾಪ್ರಭಂದನೆ ಮಂಡನೆಗೆ ಬೆಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ನೀಡಿ ಗೌರವಿಸಿದೆ.ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯ ಉಪ ನಿರ್ದೇಸಕರಾಗಿರುವ ಗಂಗಾಧರ್ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು ಹೋಬಳಿಯ ಬಸನಪಲ್ಲಿ ಎಂಬ ಕುಗ್ರಾಮದ ರೈತಾಪಿ ಕುಟುಂಬದ ಕುಡಿ ಗ್ರಾಮದ ಸುಬ್ಬನ್ನ ಮತ್ತು ಮಲ್ಲಮ್ಮ ಕೃಷಿಕ ದಂಪತಿಯ ತೃತೀಯ ಪುತ್ರ ಆಗಿರುವ ಈಗಲೂ ಆಂಧ್ರ ಗಂಡಿಯಂಚಿನ ಗ್ರಾಮ ಬಸನಪಲ್ಲಿಯಿಂದ ತಾವು ಅಧಿಕಾರಿಯಾಗಿರುವ ತಮ್ಮ ಕಾರ್ಯಕ್ಷೇತ್ರದ ಕೋಲಾರ ಜಿಲ್ಲಾ ಪಂಚಾಯಿತಿ ಕಚೇರಿಗೆ ಹೋಗಿಬರುತ್ತಾರೆ ರಜಾ ದಿನಗಳಲ್ಲಿ ತಮ್ಮ ಜಮೀನಿನಲ್ಲಿ ಕುಟುಂದ ಸದಸ್ಯರೊಂದಿಗೆ ದಿನ ಪೂರ್ತಿ ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತಾರೆ.
ಗಂಗಾಧರ್ ಕೆ.ಎಸ್,ಎ.ಎಸ್ ಅಧಿಕಾರಿಯಾಗಿ ವ್ಯಾಸಾಂಗದ ಕುರಿತಾಗಿ ನಿರಂತರವಾಗಿ ಅಧ್ಯಯನದಲ್ಲಿ ತೊಡಗಿಸಿಕೊಂಡಿದ್ದಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



