ಶ್ರೀನಿವಾಸಪುರ:ಕೆ.ಎಸ್,ಎ.ಎಸ್ ಉಪ ನಿರ್ದೇಶಕರು ರಾಜ್ಯ ಲೆಕ್ಕ ಪತ್ರ ಇಲಾಖೆ ಹಾಲಿ ಕೋಲಾರ ಜಿಲ್ಲಾ ಪಂಚಾಯಿತಿಯ ಲೆಕ್ಕಾಧಿಕಾರಿ ಆಗಿರುವ ಬಿ.ಎಸ್.ಗಂಗಾಧರ್ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ. ಬೆಂಗಳುರು ಕೇಂದ್ರ ವಿಶ್ವ ವಿದ್ಯಾಲಯದ ವಾಣಿಜ್ಯ ವಿಭಾಗದ ಮಾಜಿ ಡಿನ್ ಮತ್ತು ಅಧ್ಯಕ್ಷರು ಅದ ಡಾ.ಎಂ.ಮುನಿರಾಜು ಅವರ ಮಾರ್ಗದರ್ಶನದಲ್ಲಿ ವಾಣಿಜ್ಯ ವಿಭಾಗದಲ್ಲಿ ಲೆಕ್ಕಪತ್ರಗಳು ಮತ್ತು ಲೆಕ್ಕ ಪರಿಶೋಧನೆ ಕುರಿತಾಗಿ ಮಹಾಪ್ರಭಂದನೆ ಮಂಡನೆಗೆ ಬೆಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ನೀಡಿ ಗೌರವಿಸಿದೆ.ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯ ಉಪ ನಿರ್ದೇಸಕರಾಗಿರುವ ಗಂಗಾಧರ್ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು ಹೋಬಳಿಯ ಬಸನಪಲ್ಲಿ ಎಂಬ ಕುಗ್ರಾಮದ ರೈತಾಪಿ ಕುಟುಂಬದ ಕುಡಿ ಗ್ರಾಮದ ಸುಬ್ಬನ್ನ ಮತ್ತು ಮಲ್ಲಮ್ಮ ಕೃಷಿಕ ದಂಪತಿಯ ತೃತೀಯ ಪುತ್ರ ಆಗಿರುವ ಈಗಲೂ ಆಂಧ್ರ ಗಂಡಿಯಂಚಿನ ಗ್ರಾಮ ಬಸನಪಲ್ಲಿಯಿಂದ ತಾವು ಅಧಿಕಾರಿಯಾಗಿರುವ ತಮ್ಮ ಕಾರ್ಯಕ್ಷೇತ್ರದ ಕೋಲಾರ ಜಿಲ್ಲಾ ಪಂಚಾಯಿತಿ ಕಚೇರಿಗೆ ಹೋಗಿಬರುತ್ತಾರೆ ರಜಾ ದಿನಗಳಲ್ಲಿ ತಮ್ಮ ಜಮೀನಿನಲ್ಲಿ ಕುಟುಂದ ಸದಸ್ಯರೊಂದಿಗೆ ದಿನ ಪೂರ್ತಿ ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತಾರೆ.
ಗಂಗಾಧರ್ ಕೆ.ಎಸ್,ಎ.ಎಸ್ ಅಧಿಕಾರಿಯಾಗಿ ವ್ಯಾಸಾಂಗದ ಕುರಿತಾಗಿ ನಿರಂತರವಾಗಿ ಅಧ್ಯಯನದಲ್ಲಿ ತೊಡಗಿಸಿಕೊಂಡಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



