ಶ್ರೀನಿವಾಸಪುರ:ಸರ್ಕಾರಿ ಸೇವೆಯಿಂದ ನಿವೃತ್ತರಾದವರು ನೆಮ್ಮದಿಯ ಹಾಗು ಆರೋಗ್ಯವಂತರಾಗಿ ಜೀವನ ಮಾಡಲು ನಿಯಮಿತ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗಾಸನ ಬಹು ಸಹಕಾರಿಯಾಗುತ್ತದೆ ನಿರಂತರವಾಗಿ ಯೋಗಾಭ್ಯಾಸ ಮಾಡುವ ಮೂಲಕ ಉತ್ತಮ ಆರೋಗ್ಯ ಪಡೆಯುವಂತೆ ಯಲಹಂಕದ ವಿವೇಕಾನಂದ ಯೋಗ ಶಿಕ್ಷಣ ಕೇಂದ್ರದ ಮುಖ್ಯಸ್ಥ ಮಾದಪ್ಪ ಹೇಳಿದರು. ಅವರು ಶ್ರೀನಿವಾಸಪುರದ ಪತಂಜಲಿ ಮುದ್ರಾ ಯೋಗ ಶಿಕ್ಷಣ ಸಮಿತಿ ಸಕ್ರೀಯ ಸದಸ್ಯ ಹಾಗು ಪಶು ವೈದ್ಯಾಧಿಕಾರಿ ಡಾ.ವೆಂಕಟೇಶ್ ತಮ್ಮ ಸರ್ಕಾರಿ ವೃತ್ತಿ ಜೀವನದಲ್ಲಿ ನಿವೃತ್ತರಾದ ಸಂದರ್ಭದಲ್ಲಿ ಡಾ.ವೆಂಕಟೇಶ್ ದಂಪತಿಯನ್ನು ಶ್ರೀನಿವಾಸಪುರದ ಶ್ರೀ ಪತಂಜಲಿ ಮುದ್ರಾ ಯೋಗ ಶಿಕ್ಷಣ ಸಮಿತಿ ವತಿಯಿಂದ ಗೌರವಿಸಿದರು.
ಶ್ರೀ ಪತಂಜಲಿ ಮುದ್ರಾ ಯೋಗ ಶಿಕ್ಷಣ ಸಮಿತಿ ಶಿಕ್ಷಕ ವೆಂಕಟೇಶ್ ಬಾಬು ಮಾತನಾಡಿ ಡಾ.ವೆಂಕಟೇಶ್ ರವರು ಪಶು ವೈದ್ಯಾಧಿಕಾರಿಗಳಾಗಿ ತಮ್ಮ ಸೇವಾ ಅವಧಿಯಲ್ಲಿ ಉತ್ತಮವಾಗಿ ಸೇವೆಯನ್ನು ಸಮಾಜ ಮೆಚ್ಚುವ ರಿತಿಯಲ್ಲಿ ನಿರ್ವಹಿಸಿದ್ದಾರೆ ಅವರು ಕೆಲಸ ಮಾಡಿದ ಗ್ರಾಮೀಣ ಭಾಗದಲ್ಲಿ ಜನರು ಅವರ ಸೇವೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಾರೆ ಜನ ಮೆಚ್ಚಿದರೆ ಭಗವಂತ ಮೆಚ್ಚಿದಂತೆ ಅವರು ನಿವೃತ್ತಿ ಜೀವನ ಆರೋಗ್ಯ ಪೂರ್ಣವಾಗಿರಲಿ ಎಂದು ಪತಂಜಲಿ ಮುದ್ರಾ ಯೋಗ ಶಿಕ್ಷಣ ಸಮಿತಿ ವತಿಯಿಂದ ಶುಭಹಾರೈಸಿದರು. ಇದೆ ಸಂದರ್ಭದಲ್ಲಿ ಕಾರ್ತೀಕ ಮಾಸದ ಮಹತ್ವ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳಾಗಿದ್ದ ಜಯರಾಮಪ್ಪ ಅಧ್ಯಕ್ಷತೆ ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ರಂಗಪ್ಪಶೆಟ್ಟಿ ಪಾಲ್ಗೋಂಡಿದ್ದರು ಕಾರ್ಯಕ್ರಮದಲ್ಲಿ ಉಪನ್ಯಾಸಕ ಶಂಕರೇಗೌಡ ಶಿಕ್ಷಕ ಚಂದ್ರಣ್ಣ,ವಕೀಲ ವಿನಯಕುಮಾರ್, ಎಲ್.ಐ.ಸಿ ಶ್ರೀನಿವಾಸನ್ ಯೋಗ ಬಂಧುಗಳಾದ ಗೇಟ್ ಲಕ್ಷ್ಮಣರೆಡ್ಡಿ,ಮದ್ವೇಶ್,ವೆಂಕಟೇಶ್,ನಾರಾಯಣಸ್ವಾಮಿ,ಪ್ರಭಾಕರ್, ವಿನಯ್,ಮಂಜುಳ,ಭಾಗ್ಯಲಕ್ಷ್ಮೀ, ಜಯಮ್ಮ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



