ಶ್ರೀನಿವಾಸಪುರ:ಸರ್ಕಾರಿ ಸೇವೆಯಿಂದ ನಿವೃತ್ತರಾದವರು ನೆಮ್ಮದಿಯ ಹಾಗು ಆರೋಗ್ಯವಂತರಾಗಿ ಜೀವನ ಮಾಡಲು ನಿಯಮಿತ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗಾಸನ ಬಹು ಸಹಕಾರಿಯಾಗುತ್ತದೆ ನಿರಂತರವಾಗಿ ಯೋಗಾಭ್ಯಾಸ ಮಾಡುವ ಮೂಲಕ ಉತ್ತಮ ಆರೋಗ್ಯ ಪಡೆಯುವಂತೆ ಯಲಹಂಕದ ವಿವೇಕಾನಂದ ಯೋಗ ಶಿಕ್ಷಣ ಕೇಂದ್ರದ ಮುಖ್ಯಸ್ಥ ಮಾದಪ್ಪ ಹೇಳಿದರು. ಅವರು ಶ್ರೀನಿವಾಸಪುರದ ಪತಂಜಲಿ ಮುದ್ರಾ ಯೋಗ ಶಿಕ್ಷಣ ಸಮಿತಿ ಸಕ್ರೀಯ ಸದಸ್ಯ ಹಾಗು ಪಶು ವೈದ್ಯಾಧಿಕಾರಿ ಡಾ.ವೆಂಕಟೇಶ್ ತಮ್ಮ ಸರ್ಕಾರಿ ವೃತ್ತಿ ಜೀವನದಲ್ಲಿ ನಿವೃತ್ತರಾದ ಸಂದರ್ಭದಲ್ಲಿ ಡಾ.ವೆಂಕಟೇಶ್ ದಂಪತಿಯನ್ನು ಶ್ರೀನಿವಾಸಪುರದ ಶ್ರೀ ಪತಂಜಲಿ ಮುದ್ರಾ ಯೋಗ ಶಿಕ್ಷಣ ಸಮಿತಿ ವತಿಯಿಂದ ಗೌರವಿಸಿದರು.
ಶ್ರೀ ಪತಂಜಲಿ ಮುದ್ರಾ ಯೋಗ ಶಿಕ್ಷಣ ಸಮಿತಿ ಶಿಕ್ಷಕ ವೆಂಕಟೇಶ್ ಬಾಬು ಮಾತನಾಡಿ ಡಾ.ವೆಂಕಟೇಶ್ ರವರು ಪಶು ವೈದ್ಯಾಧಿಕಾರಿಗಳಾಗಿ ತಮ್ಮ ಸೇವಾ ಅವಧಿಯಲ್ಲಿ ಉತ್ತಮವಾಗಿ ಸೇವೆಯನ್ನು ಸಮಾಜ ಮೆಚ್ಚುವ ರಿತಿಯಲ್ಲಿ ನಿರ್ವಹಿಸಿದ್ದಾರೆ ಅವರು ಕೆಲಸ ಮಾಡಿದ ಗ್ರಾಮೀಣ ಭಾಗದಲ್ಲಿ ಜನರು ಅವರ ಸೇವೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಾರೆ ಜನ ಮೆಚ್ಚಿದರೆ ಭಗವಂತ ಮೆಚ್ಚಿದಂತೆ ಅವರು ನಿವೃತ್ತಿ ಜೀವನ ಆರೋಗ್ಯ ಪೂರ್ಣವಾಗಿರಲಿ ಎಂದು ಪತಂಜಲಿ ಮುದ್ರಾ ಯೋಗ ಶಿಕ್ಷಣ ಸಮಿತಿ ವತಿಯಿಂದ ಶುಭಹಾರೈಸಿದರು. ಇದೆ ಸಂದರ್ಭದಲ್ಲಿ ಕಾರ್ತೀಕ ಮಾಸದ ಮಹತ್ವ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳಾಗಿದ್ದ ಜಯರಾಮಪ್ಪ ಅಧ್ಯಕ್ಷತೆ ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ರಂಗಪ್ಪಶೆಟ್ಟಿ ಪಾಲ್ಗೋಂಡಿದ್ದರು ಕಾರ್ಯಕ್ರಮದಲ್ಲಿ ಉಪನ್ಯಾಸಕ ಶಂಕರೇಗೌಡ ಶಿಕ್ಷಕ ಚಂದ್ರಣ್ಣ,ವಕೀಲ ವಿನಯಕುಮಾರ್, ಎಲ್.ಐ.ಸಿ ಶ್ರೀನಿವಾಸನ್ ಯೋಗ ಬಂಧುಗಳಾದ ಗೇಟ್ ಲಕ್ಷ್ಮಣರೆಡ್ಡಿ,ಮದ್ವೇಶ್,ವೆಂಕಟೇಶ್,ನಾರಾಯಣಸ್ವಾಮಿ,ಪ್ರಭಾಕರ್, ವಿನಯ್,ಮಂಜುಳ,ಭಾಗ್ಯಲಕ್ಷ್ಮೀ, ಜಯಮ್ಮ ಮುಂತಾದವರು ಇದ್ದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



