ನ್ಯೂಜ್ ಡೆಸ್ಕ್:ನನ್ನದು ಕಾಂಗ್ರೆಸ್ ಸಮುದಾಯ ಸಮಾಜದ ಎಲ್ಲಾ ವರ್ಗಗಳನ್ನು ನಾನು ಪ್ರೀತಿಸುತ್ತೇನೆ ಸಿಎಂ ಹುದ್ದೆ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಚ್ಚರಿಯಾಗಿ ಹೇಳಿದ್ದಾರೆ.
ಅಧಿಕಾರಕ್ಕಾಗಿ ಬಣ ಬಡಿದಾಟದ ನಡುವೆ ಒಕ್ಕಲಿಗ ಸಮುದಾಯದ ನಂಜಾವದೂತ ಸ್ವಾಮೀಜಿ ಅವರೊಂದಿಗೆ ಭೇಟಿಯಾದ ಡಿಕೆ ಶಿವಕುಮಾರ್ ಅವರನ್ನು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಕಾಂಗ್ರೆಸ್ ನನ್ನ ಸಮುದಾಯವಾಗಿದ್ದು, ರಾಜ್ಯದ ಎಲ್ಲಾ ಸಮುದಾಯಗಳನ್ನು ಸಮಾನವಾಗಿ ನೋಡುವುದಾಗಿ ಹೇಳಿದರು.
ಯಾವುದಕ್ಕೂ ನಾನು ಆತುರಪಡುತ್ತಿಲ್ಲ ನನಗೆ ಏನೂ ಬೇಡ ನನ್ನ ಪಕ್ಷ ಎಲ್ಲಾ ನಿರ್ಧಾರ ತೆಗೆದುಕೊಳ್ಳುತ್ತದೆ. ನಾನು ಯಾವುದೇ ಒಂದು ಸಮುದಾಯಕ್ಕೆ ಸೇರಿದವನಲ್ಲ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ನಾಯಕತ್ವದ ಬಗ್ಗೆ ಜೋರಾದ ಚರ್ಚೆ ನಡೆಯುತ್ತಿರುವಂತೆಯೇ ನನಗೇನೂ ಬೇಡ, ಆತುರಪಡಲು ಬಯಸುವುದಿಲ್ಲ ಮತ್ತು ಪಕ್ಷದ ಹೈಕಮಾಂಡ್ ಕಡೆ ತೋರಿಸಿರುವುದು ರಾಜಕೀಯ ವಲಯದಲ್ಲಿ ಅಚ್ಚರಿಗೆ ಕಾರಣವಾಗಿದೆ.
ಖಂಡಿತವಾಗಿ ದೆಹಲಿಗೆ ಹೋಗ್ತೀನಿ: ಮುಖ್ಯಮಂತ್ರಿ ಹುದ್ದೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ಜೊತೆ ಸಭೆ ನಡೆಯಲಿದೆ ಎಂಬ ವದಂತಿಗಳಿದ್ದರೂ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ಕರ್ನಾಟಕದ ರೈತ ಸಮಸ್ಯೆಗಳನ್ನು ಇಟ್ಟುಕೊಳ್ಳಲು ದೆಹಲಿಗೆ ಭೇಟಿ ನೀಡುವುದಾಗಿ ಶಿವಕುಮಾರ್ ಹೇಳಿದರು.
ದೆಹಲಿಗೆ ಹೋಗುತ್ತೇನೆ.
ಅದು ನಮ್ಮ ದೇವಾಲಯ. ಕಾಂಗ್ರೆಸ್ಗೆ ದೀರ್ಘ ಇತಿಹಾಸ ಇದೆ, ದೆಹಲಿ ಯಾವಾಗಲೂ ನಮಗೆ ಮಾರ್ಗದರ್ಶನ ನೀಡುತ್ತದೆ. ಅವರು ನನ್ನನ್ನು, ಪಕ್ಷದ ನಾಯಕರು ಮತ್ತು ಮುಖ್ಯಮಂತ್ರಿಯನ್ನು ಕರೆದಾಗ, ನಾವು ಅಲ್ಲಿಗೆ ಹೋಗುತ್ತೇವೆ ಎಂದರು.
ದೆಹಲಿಯಲ್ಲಿ ಬಹಳಷ್ಟು ಕೆಲಸಗಳಿವೆ. ಸಂಸತ್ತಿನ ಚಳಿಗಾಲದ ಅಧಿವೇಶನ ಬರುತ್ತಿದ್ದು, ಸಂಸದರನ್ನು ಭೇಟಿಯಾಗಬೇಕಾಗಿದೆ. ಏಕೆಂದರೆ ನಮ್ಮ ಕೆಲವು ಯೋಜನೆಗಳನ್ನು ಮುಂದಕ್ಕೆ ತೆಗೆದುಕೊಳ್ಳಬೇಕಾಗಿದೆ. ಮುಖ್ಯಮಂತ್ರಿ ಕೇಂದ್ರದೊಂದಿಗೆ ಸಮಸ್ಯೆಗಳನ್ನು ಚರ್ಚಿಸಬೇಕಿದೆ. ಮೆಕ್ಕೆಜೋಳದ ಸಮಸ್ಯೆ ಇದೆ. ಕೇಂದ್ರ ಸರ್ಕಾರ ರೈತರಿಗೆ ಬೆಂಬಲ ನೀಡುತ್ತಿಲ್ಲ ಅಥವಾ ಸಹಾಯ ಮಾಡುತ್ತಿಲ್ಲ. ನಾವು ಕಾರ್ಖಾನೆ ಮಾಲೀಕರ ಸಭೆ ಕರೆಯಲು ನಿರ್ಧರಿಸಿದ್ದೇವೆ ಎಂದ್ದು ತಿಳಿಸಿದರು.
ಡಿಕೆಶಿ ಭೇಟಿಯಾದ ಕೋಲಾರ ಶಾಸಕರು
ಈ ಮಧ್ಯೆ ಮಾಲೂರಿನ ಕೆ. ವೈ. ನಂಜೇಗೌಡ, ಕೋಲಾರದ ಕೊತ್ತೂರು ಮಂಜುನಾಥ್,ಕುಣಿಗಲ್ ನ ಡಾ. ರಂಗನಾಥ್,ಪ್ರೊಫೆಸರ್ ಎಂ. ವಿ. ರಾಜೇಗೌಡ ಮತ್ತು ಮುಳಬಾಗಿಲು ಮುಖಂಡ ಆದಿ ನಾರಾಯಣ, ಅವರು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು, ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



