ಶ್ರೀನಿವಾಸಪುರ: ಅಕ್ರಮವಾಗಿ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿಯೊಬ್ನನ್ನು ಶ್ರೀನಿವಾಸಪುರ ಅಬಕಾರಿ ಅಧಿಕಾರಿಗಳು ಬಂಧಸಿರುತ್ತಾರೆ.ಆಂಧ್ರದ ಅನ್ನಮಯ್ಯ ಜಿಲ್ಲೆಯ ಚಂಬಕೂರಿಗೆ ಹೊಂದಿಕೊಂಡಿರುವ ಗಡಿಯಂಚಿನ ಗ್ರಾಮವಾದ ತಾಲೂಕಿನ ಪುಲಗುರುಕೊಟೆ ಗ್ರಾಮದ ವೆಂಕಟರಮಣಪ್ಪ ಎಂಬುವನನ್ನು ಬಂದಿಸಿದ ಅಬಕಾರಿ ಅಧಿಕಾರಿಗಳು ಸುಮಾರು 50 ಸಾವಿರ ಮೌಲ್ಯದ 1 ಕೆಜಿಗಿಂತಲೂ ಹೆಚ್ಚಿನ ತೂಕದ ಗಾಂಜಾ ವಶಕ್ಕೆ ಪಡೆದುಕೊಂಡಿರುತ್ತಾರೆ.
ವೆಂಕಟರಮಣಪ್ಪ ಆಂಧ್ರದಿಂದ ಗಾಂಜಾ ತಂದು ಇಲ್ಲಿ ಮಾರಾಟ ಮಾಡುತಿದ್ದ ಎಂದು ಹೇಳಲಾಗಿದ್ದು ಅಬಕಾರಿ ಅಧಿಕಾರಿ ರೋಹಿತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿರುತ್ತಾರೆ.
ಅರೋಪಿಯನ್ನ ಅಧಿಕಾರಿಗಳು ನ್ಯಾಯಾಲಯಕ್ಕೆ ಒಪ್ಪಿಸಿರುತ್ತಾರೆ.
ಶ್ರೀನಿವಾಸಪುರ ಪಟ್ಟಣದ ವ್ಯಾಪ್ತಿಯಲ್ಲೂ ಅಕ್ರಮ ಗಾಂಜ ವ್ಯವಹಾರ ನಡೆಯುತ್ತಿರುವ ಬಗ್ಗೆ ಇತ್ತಿಚಿಗೆ ಅಬಕಾರಿ ಅಧಿಕಾರಿಗಳು ಕೆಲವರನ್ನು ಕರೆದೊಯಿದು ವಿಚಾರಣೆಗೆ ಒಳಪಡಿಸಿದ ಬಗ್ಗೆ ಹೇಳುತ್ತಾರೆ.
ಕಳೆದ ಕೆಲವು ದಿನಗಳ ಹೊಂದೆ ಮುಳಬಾಗಿಲು ತಾಲೂಕಿನಲ್ಲೊಂದು ನಡೆದ ಅಕ್ರಮ ಗಾಂಜಾ ವ್ಯವಹಾರದಲ್ಲಿ ಅಲ್ಲಿನ ಅಬಕಾರಿ ಅಧಿಕಾರಿಗಳು ದಂಪತಿಯನ್ನು ಬಂದಿಸಿದ್ದು ಅವರ ನೀಡಿದ ಮಾಹಿತಿಯಂತೆ ತಾಲೂಕಿನ ಪುರ್ನಪಲ್ಲಿ ಗ್ರಾಮದ ವ್ಯಕ್ತಿಯನ್ನು ಕರೆದೊಯಿದು ವಿಚಾರಣೆ ನಡೆಸಿರುತ್ತಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



