ಶ್ರೀನಿವಾಸಪುರ:ಮನೆಗೆ ತೆರಳುತ್ತಿದ್ದ ಗೃಹಣಿಯನ್ನು ತಡೆದ ಅಪರಿಚಿತರು ಪೋಲಿಸರೆಂದು ಪರಿಚಯಿಸಿಕೊಂಡು ಅಕೆಯ ಕತ್ತಿನಲ್ಲಿರುವ ಸರವನ್ನು ತಗೆಸಿ ಕದ್ದುಕೊಂಡು ಹೋಗಿರುವ ಘಟನೆ ಪಟ್ಟಣದ ಪ್ರವಾಸಿ ಮಂದಿರದ ಬಳಿ ನಡೆದಿರುತ್ತದೆ.
ರತ್ನಮ್ಮ ಎಂಬ ನಡುವಯಸ್ಸಿನ ಮಹಿಳೆ ಸಂಜೆ ಸಮಯದಲ್ಲಿ ಊರಿಂದ ಬಂದು ಕಾಲೇಜು ಬಳಿ ಬಸ್ಸಿಳಿದು ಮನೆ ಕಡೆಗೆ ನಡೆದುಕೊಂಡು ಹೋರಟಿದ್ದಾರೆ, ಪ್ರವಾಸಿ ಮಂದಿರದ ಬಳಿ ಸುಮಾರು ಮೂರು ಮಂದಿ ಇದ್ದರು ಎನ್ನಲಾದ ಅಪರಿಚಿತರು ಆಕೆಯನ್ನು ತಡೆದಿದ್ದಾರೆ ಆತ್ಮೀಯತೆಯಿಂದ ಅಕ್ಕ ಎಂದು ಮಾತನಾಡಿಸಿ ಮುಂದೆ ಕಳ್ಳರ ಗ್ಯಾಂಗ್ ಇದೆ ನಿಮ್ಮ ಕತ್ತಿನಲ್ಲಿರುವ ಬಂಗಾರದ ಸರವನ್ನು ತಗೆದು ನಿಮ್ಮ ಪರ್ಸಿನಲ್ಲಿ ಇಟ್ಟುಕೊಳ್ಳಿ ಹಿಂದೆ ನಮ್ಮ ಸಾಹೇಬರು ಇದ್ದಾರೆ ಅವರೆ ಹೇಳಿದ್ದು ಎಂದು ನಂಬಿಸಿದ್ದಾರೆ,ಗಾಭರಿಯಾದ ಮಹಿಳೆ ತಕ್ಷಣ ಕತ್ತಿನಲ್ಲಿದ್ದ ಸರ ತಗೆದು ಕೈಯಲ್ಲಿದ್ದ ಪರ್ಸಿನಲ್ಲಿ ಇಡಲು ಅಪರಿಚಿನ ಸಹಾಯ ಪಡೆದಿದ್ದಾರೆ ಇದನ್ನೆ ಅವಕಾಶ ಮಾಡಿಕೊಂಡ ಅಪರಿಚಿತರು ಪರ್ಸಿನ ಜಿಪ್ ತಗೆದಿದ್ದಾರೆ ಆಕೆ ಪರ್ಸಿನಲ್ಲಿ ಬಂಗಾರದ ಸರ ಇಡುವಾಗ ಕೈಚಳಕ ತೊರಿಸಿ ಸರವನ್ನು ಯಾಮಾರಿಸಿದ್ದಾರೆ,ನಂತರದಲ್ಲಿ ಸಾಹೇಬರು ಕರಿತಿದ್ದಾರೆ ನಾವು ಬರುತ್ತೇವೆ ಎಂದು ಹೋರಟು ಹೋಗಿದ್ದಾರೆ ಮನೆಗೆ ಹೋದ ಮಹಿಳೆ ಪರ್ಸ್ ತಗೆದು ನೋಡಿದಾಗ ಅದರಲ್ಲಿ ಬಂಗಾರದ ಸರ ಇಲ್ಲದ್ದು ನೋಡಿ ಗಲಿಬಿಲಿಗೊಂಡಿದ್ದಾಳೆ ತಡಬಡಾಯಿಸಿಕೊಂಡು ನಡೆದಂತ ವಿಚಾರವನ್ನು ಕುಟುಂಬಸ್ಥರರೊಂದಿಗೆ ಹಂಚಿಕೊಂಡು ಗೋಳಾಡಿದ್ದಾರೆ ನಂತರ ಶ್ರೀನಿವಾಸಪುರ ಠಾಣೆಯಲ್ಲಿ ದೂರು ನೀಡಿರುತ್ತಾರೆ.
ಇತ್ತಿಚಿಗೆ ಪಟ್ಟಣದಲ್ಲಿ ಸರಗಳ್ಳತನ ವಾಹನ ಕಳ್ಳತನ ಜೇಬುಗಳ್ಳತನಗಳು ಹೆಚ್ಚಾಗುತ್ತಿದ್ದರು ಪೋಲಿಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರ ಆಕ್ರೋಶ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Monday, June 16