ಶ್ರೀನಿವಾಸಪುರ:ಶ್ರೀನಿವಾಸಪುರ ಪಟ್ಟಣದಲ್ಲಿ ಇತ್ತಿಚಿಗೆ ಕಳ್ಳತನ ಹೆಚ್ಚುತ್ತಿದ್ದು ಇದರಿಂದ ಸಾರ್ವಜನಿಕರು ಕಂಗಾಲಾಗಿದ್ದಾರೆ,ನಿಲ್ಲಿಸಿದ್ದ ಜಾಗದಲ್ಲೆ ದ್ವಿಚಕ್ರವಾಹನ ಕ್ಷ್ಣಣಾರ್ಧದಲ್ಲಿ ಮಾಯವಾಗುತ್ತಿವೆ.
ಪಟ್ಟಣದ ವಿವೇಕಾನಂದ ವೃತ್ತದ ಬಳಿ ಇರುವ ಮೊಟ್ಟೆ ಅಂಗಡಿ ಮಾಲಿಕ ಮೂತ್ರ ವಿಸರ್ಜನೆಗೆ ಹೋಗಿದ್ದ ಸಮಯದಲ್ಲಿ ಯುವಕನೊರ್ವ ಅಂಗಡಿಗೆ ನುಗ್ಗಿ ಕ್ಯಾಷ್ ಬಾಕ್ಸ್ ನಲ್ಲಿದ್ದ ನಗದು ಮೂರು ಮೊಬೈಲ್ ಗಳನ್ನು ಕದ್ದುಕೊಂಡು ಹೋಗುತ್ತಿದ್ದಾನೆ ಅದೆ ಸಮಯಕ್ಕೆ ಅಂಗಡಿ ಮಾಲಿಕ ನಾಗರಾಜ್ ಬಂದಿದ್ದು ಕದ್ದು ಓಡಿ ಹೋಗುತ್ತಿದ್ದ ಯುವಕನನ್ನು ಸಾರ್ವಜನಿಕರ ಸಹಕಾರದೊಂದಿಗೆ ಅಟ್ಟಾಡಿಸಿಕೊಂಡು ಹೋಗಿ ಅಜಾದ ರಸ್ತೆಯ ಗಲ್ಲಿಯಲ್ಲಿ ಹಿಡಿದು ಮೊಬೈಲ್ ಮತ್ತು ನಗದು ವಾಪಸ್ಸು ಪಡೆದಿರುತ್ತಾನೆ.ತೀರಾ ಇತ್ತಿಚಿಗೆ ಇಂದಿರಾಭವನ್ ವೃತ್ತದಲ್ಲಿರುವ ಇಂತಹುದೆ ಘಟನೆ ನಡೆದಿದ್ದು ಕೃಷ್ಣಮೂರ್ತಿ ಎಂಬವರ ದಿನಸಿ ಅಂಗಡಿಯ ಕ್ಯಾಷ್ ಬಾಕ್ಸ್ ನಲ್ಲಿದ್ದ ಹತ್ತು ಸಾವಿರ ನಗದು ಹಾಡು ಹಗಲೆ ಕಳ್ಳತನ ಆಗಿರುವ ಬಗ್ಗೆ ಸಾರ್ವಜನಿಕರು ಹೇಳುತ್ತಾರೆ.
ಗುರುವಾರ ಮಧ್ಯಾಹ್ನ ಎಂ.ಜಿ.ರಸ್ತೆಯ ಸಂಗೀತಾ ಚಿತ್ರಮಂದಿರ ಬಳಿ ಇರುವಂತ ತೆಂಗಿನಕಾಯಿ ಹೊಲ್ ಸೇಲ್ ಅಂಗಡಿ ಮುಂಬಾಗ ನಿಲ್ಲಿಸಿದ್ದ ಅಕ್ಟಿವ್ ಹೊಂಡಾ ಸ್ಕೂಟರ್ ಕ್ಷಣಾರ್ದದಲ್ಲಿ ಕಳ್ಳತನವಾಗಿದ್ದಾಗಿದೆ ಎಂದು ವಾಹನ ಮಾಲಿಕ ವೇಣು ಶ್ರೀನಿವಾಸಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಜಾತ್ರೆಯಲ್ಲಿ ಕಳ್ಳರ ಕೈಚಳಕ
ತಾಲೂಕಿನ ದ್ವಾರಸಂದ್ರ ಜಾತ್ರೆಯಲ್ಲಿ ಜನಸಂದಣಿ ನಡುವೆ ಕಳ್ಳರು ಕೈ ಚಳಕ ತೊರಿಸಿದ್ದು ಇಬ್ಬರು ಮಹಿಳೆಯರು ಸರ ಕಳೆದುಕೊಂಡಿದ್ದಾರೆ,ಒರ್ವ ಮಹಿಳೆ ದರ್ಶನಕ್ಕೆ ದೇವಾಲಯದ ಬಳಿ ನಿಂತಿದ್ದಾಗ ಸರ ಕಳ್ಳತನವಾಗಿದ್ದರೆ,ಮತ್ತೊಬ್ಬ ಮಹಿಳೆ ಜಾತ್ರೆಯಲ್ಲಿ ತಿಂಡಿಗಳನ್ನು ಕೊಳ್ಳುತ್ತಿದ್ದಾಗ ಸರ ಕಳ್ಳತನವಾಗಿದೆ ಎಂದು ಗ್ರಾಮಸ್ಥರು ಹೇಳುತ್ತಾರೆ.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27