ಬೆಂಗಳೂರು:ಬೆಂಗಳೂರಿನ ಹೆಬ್ಬಾಳದ ನೂತನ flyover ಮೇಲುಸೇತುವೆಯನ್ನು ಸಿಎಂ ಸಿದ್ದರಾಮಯ್ಯ ಹಾಗು ಡಿ.ಸಿ.ಎಂ ಶಿವಕುಮಾರ್ ಇಂದು ಉದ್ಘಾಟಿಸಿದ್ದಾರೆ.
ಇಂದು ಹೆಬ್ಬಾಳ ಮೇಲು ಸೇತುವೆಯನ್ನು ಉದ್ಘಾಟಿಸಿ ಲೋಕಾರ್ಪಣೆ ಮಾಡಲಾಗಿದ್ದು ಈಗಾಗಲೇ 2 ದಿನಗಳ ಟ್ರಯಲ್ ರನ್ ನಡೆಸಲಾಗಿದೆ. ನಾಗವಾರದಿಂದ ಬರುವ ವಾಹನಗಳು ಸಿಗ್ನಲ್ ತಪ್ಪಿಸಿ ರ್ಯಾಂಪ್ ಮೂಲಕ ಸುಲಭವಾಗಿ ಹೋಗಲು ಸಹಾಯ ಮಾಡುತ್ತದೆ. ಆದರೆ, ಇದರಿಂದ ಮೆಖ್ರಿ ವೃತ್ತದಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗಬಹುದು ಎಂದು ಟ್ರಯಲ್ ರನ್ ನಲ್ಲಿ ತಿಳಿದುಬಂದಿದೆ.
700 ಮೀಟರ್ ಉದ್ದದ ಹೆಬ್ಬಾಳ ಪ್ಲೈ ಓವರ್ ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದೆ. ಈ ಫ್ಲೈಓವರ್ ಕೆ.ಆರ್ ಪುರಂ ಕಡೆಯಿಂದ ಮೇಖ್ರೀ ವೃತ್ತದವರಿಗೆ ನಿರ್ಮಾಣ ಮಾಡಲಾಗಿದ್ದು.ಇದರ ಕಾಮಗಾರಿ 2023ರಲ್ಲಿ ಆರಂಭ ಆಗಿದ್ದು, ಒಂದೂವರೆ ವರ್ಷಗಳ ಬಳಿಕ ಫ್ಲೈಓವರ್ ಕಾರ್ಯ ಪೂರ್ಣಗೊಂಡಿದೆ.
ಡಿ.ಸಿ.ಎಂ ಶಿವಕುಮಾರ್ ಯಜ್ಡಿ ರೈಡ್
ಬೆಂಗಳೂರಿನ ನೂತನ ಹೆಬ್ಬಾಳ್ ಫ್ಲೈಓವರ್ ಉದ್ಘಾಟಿಸಲಾಗಿದ್ದು, ಈ ವೇಳೆ ಡಿಸಿಎಂ ಶಿವಕುಮಾರ್ ಅವರು ರೋಡ್ಕಿಂಗ್ ಯಜ್ಡಿ ರೈಡ್ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಡಿಸಿಎಂ ಡಿಕೆಶಿ, ಹೆಬ್ಬಾಳ ಮೇಲು ಸೇತುವೆಯಲ್ಲಿ ಯೆಜ್ಡಿ ರೋಡ್ಕಿಂಗ್ ಬೈಕ್ ಸವಾರಿ ಮಾಡುವ ಮೂಲಕ ಕಾಲೇಜು ದಿನಗಳನ್ನು ಮೆಲುಕು ಹಾಕಿದ್ದಾರೆ. ಬೆಂಗಳೂರಿನ ನಾಗರಿಕರೇ, ಜಾಗತಿಕವಾಗಿ ಗುರುತಿಸಿಕೊಂಡಿರುವ ನಮ್ಮ ಬೆಂಗಳೂರು ನಗರಕ್ಕೆ ಹೊಸರೂಪವನ್ನು ನೀಡಲು ನಾವು ಬದ್ಧರಿದ್ದೇವೆ ಎಂದಿರುತಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



