ಮುಳಬಾಗಿಲು:ಮೂರು ದ್ವಿಚಕ್ರ ವಾಹನಕ್ಕೆ ಬೊಲೆರೊ ವಾಹನ ಡಿಕ್ಕಿ ಹೊಡೆದು ದ್ವಿಚಕ್ರ ವಾಹನಗಳಲ್ಲಿದ್ದ ಐವರು ಸಾವನಪ್ಪಿರುವ ದಾರುಣ ಘಟನೆಗೆ ಕಾರಣ ಇದೆನಾ ಎಂಬ ಪ್ರಶ್ನೆ ಉದ್ಭಸಿದೆ.
ಬೊಲೆರೊ ವಾಹನ ಚಾಲಕ ಮಣಿಕಂಠ ಮೊಬೈಲ್ ನಲ್ಲಿ ಮಾತನಾಡಿಕೊಂಡು ಅಜಾಗುರುಕತೆಯಿಂದ ಚಾಲನೆ ಮಾಡಿದ ಪರಿಣಾಮ ಎದುರುಗಡೆ ಹೋಗುತ್ತಿದ್ದ ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಮೂರು ದ್ವಿಚಕ್ರ ವಾಹನಗಳು ಕೆಳಗೆ ಬಿದ್ದಿವೆ ಅದರಲ್ಲಿ ಕುಳಿತವರೊಗೆ ತಲೆ ಎದೆಗೆ ತೀವ್ರವಾಗಿ ಗಾಯಗಳಾಗಿ ನಾಲ್ವರು ಸ್ಥಳದಲ್ಲಿ ಮೃತ ಪಟ್ಟರೆ ಒರ್ವ ಮಹಿಳೆ ಅಸ್ಪತ್ರೆಯಲ್ಲಿ ಸಾವನಪ್ಪಿದ್ದಾಳೆ.
ಮುಳಬಾಗಿಲು ತಾಲ್ಲೂಕು ಎನ್.ವಡ್ಡಹಳ್ಳಿ-ಗುಡಿಪಲ್ಲಿ ಮಾರ್ಗದಲ್ಲಿ ಬುಧವಾರ ಸಂಜೆ ನಡೆದಿರುವ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರೆಲ್ಲ ಕೃಷಿ ಕಾರ್ಮಿಕರು ಎಂಬುದು ಧಾರುಣ,
ಮೃತ ಪಟ್ಟವರು ಎಂದಿನಂತೆ ಕೃಷಿ ಕಾರ್ಯ ಮುಗಿಸಿಕೊಂಡು ಊರಿಗೆ ಹೋರಟಿದ್ದರು ಇದರಿಗೆ ಮೃತ್ಯ ಎದುರಲ್ಲಿ ಬರುತ್ತದೆ ಎಂಬ ಕಲ್ಪನೆಯೂ ಇಲ್ಲದೆ ಗ್ರಾಮ ಸೇರಿಕೊಳ್ಳುವ ಅವಸರದಲ್ಲಿ ಹೋರಟವರಿಗೆ ಎದುರಿಗೆ ಮೃತ್ಯು ಬೊಲೊರೊ ವಾಹನದ ರೂಪದಲ್ಲಿ ಬಂದು ಆವರಿಸಿದೆ.
ಬೊಲೊರೊ ವಾಹನ ನಡೆಸುತ್ತಿದ್ದ ಚಿಗುರು ಮೀಸೆ ಯುವಕ ಮಣಿಕಂಠ ಸ್ಟೈಲ್ ಆಗಿ ಮೊಬೈಲ್ ನಲ್ಲಿ ಮಾತನಾಡಿಕೊಂಡು ಅತಿಯಾದ ವೇಗದಿಂದ ವಾಹನ ನಡೆಸಿದ್ದಾನೆ ಎಂಬ ಆರೋಪ ಇದೆ ಇದರಿಂದಾಗಿಯೆ ಅಪಘಾತವಾಯಿತು ಎನ್ನುತ್ತಾರೆ ಸ್ಥಳಿಯರು
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



