ಶ್ರೀನಿವಾಸಪುರ:ಶ್ರೀನಿವಾಸಪುರ ತಾಲೂಕು ಮಾಸ್ತೆನಹಳ್ಳಿ ಗ್ರಾಮ ಪಂಚಾಯಿತಿಯ ತೆರ್ನಹಳ್ಳಿ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ DVG ಮಂಜು ತಮ್ಮ ಪ್ರತಿಸ್ಪರ್ದಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ರಾಧಕೃಷ್ಣ ಅವರ ವಿರುದ್ದ 260 ಮತಗಳ ಅಂತರದಿಂದ ಗೆಲವುಸಾದಿಸಿದ್ದಾರೆ.
ತೆರ್ನಹಳ್ಳಿ ಪಂಚಾಯಿತಿ ಸದಸ್ಯ ವೀರಬದ್ರೇಗೌಡ ನಿಧನವಾಗಿದ್ದ ಹಿನ್ನಲೆಯಲ್ಲಿ ಅವರ ಪುತ್ರ DVG ಮಂಜು ಸ್ಪರ್ಧಿಸಿ ಆಯ್ಕೆಯಾಗಿದ್ದಾರೆ.
![](https://www.vcsnewz.com/wp-content/uploads/2023/07/321456.jpg)
ಜೆಡಿಎಸ್ ಅಭ್ಯರ್ಥಿ ಗೆಲವು ಘೋಷಣೆಯಾಗುತ್ತಿದ್ದಂತೆ ಜೆಡಿಎಸ್ ಕಾರ್ಯಕರ್ತರು ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಡಿವಿಜಿ ಮಂಜು ಶ್ರೀನಿವಾಸಪುರ ತಾಲೂಕು ಜೆಡಿಎಸ್ ಪಕ್ಷದ ಯುವ ಮುಖಂಡರಾಗಿ ಕಾರ್ಯನಿರ್ವಹಿಸಿದಲ್ಲದೆ ಮೊನ್ನೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹಾಲಿ ಶಾಸಕ ವೆಂಕಟಶಿವಾರೆಡ್ಡಿ ಪರವಾಗಿ ಚುರುಕಾಗಿ ಕಾರ್ಯನಿರ್ವಹಿಸಿದ್ದರು.