ನ್ಯೂಜ್ ಡೆಸ್ಕ್: ಬಿಹಾರ ರಾಜ್ಯದ ಅರಾರಿಯಾ ಜಿಲ್ಲೆಯಲ್ಲಿ ಒರ್ವ ಪತ್ರಕರ್ತನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮೃತ ಪತ್ರಕರ್ತನನ್ನು ವಿಮಲ್ ಕುಮಾರ್ ಯಾದವ್ (35) ಎಂದು ಗುರುತಿಸಲಾಗಿದ್ದು ದೈನಿಕ್ ಜಾಗರಣ ದಿನಪತ್ರಿಕೆಯ ಕ್ರೈಂ ವರದಿಗಾರನಾಗಿ ಕೆಲಸ ಮಾಡುತ್ತಿದ್ದ ಎಂದು ಪೋಲಿಸರು ತಿಳಿಸಿರುತ್ತಾರೆ.ಶುಕ್ರವಾರ ಮುಂಜಾನೆ 4.30 ಸಮಯದಲ್ಲಿ ರಾಣಿಗಂಜ್ನಲ್ಲಿರುವ ವಿಮಲ್ ಕುಮಾರ್ ಯಾದವ್ ಅವರ ಮನೆ ಬಾಗಿಲು ಬಡೆಯುವ ದುಷ್ಕರ್ಮಿಗಳು ಬಾಗಿಲು ತಗೆದ ವಿಮಲ್ ಕುಮಾರ್ ನ ಎದೆಗೆ ಗುಂಡು ಹಾರಿಸಿದ್ದಾರೆ. ಇದರಿಂದ ಕುಸಿದು ಬಿದ್ದ ವಿಮಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಮಲ್ ಅವರ ಸಹೋದರನನ್ನು ಈ ಹಿಂದೆಯೂ ಕೊಲೆ ಮಾಡಲಾಗಿದ್ದು, ಘಟನೆಗೆ ವಿಮಲ್ ಪ್ರತ್ಯಕ್ಷದರ್ಶಿಯಾಗಿದ್ದ ಎಂದು ಅರಾರಿಯಾ ಎಸ್ಪಿ ಅಶೋಕ್ ಕುಮಾರ್ ಸಿಂಗ್ ಹೇಳಿದ್ದಾರೆ. ಈ ಪ್ರಕರಣದ ಆರೋಪಿಗಳು ವಿಮಲ್ನನ್ನೂ ಹತ್ಯೆ ಮಾಡಿರಬಹುದು ಎಂದು ಶಂಕಿಸಿದ್ದಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Friday, April 24



