ನ್ಯೂಜ್ ಡೆಸ್ಕ್: ಬಿಹಾರ ರಾಜ್ಯದ ಅರಾರಿಯಾ ಜಿಲ್ಲೆಯಲ್ಲಿ ಒರ್ವ ಪತ್ರಕರ್ತನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮೃತ ಪತ್ರಕರ್ತನನ್ನು ವಿಮಲ್ ಕುಮಾರ್ ಯಾದವ್ (35) ಎಂದು ಗುರುತಿಸಲಾಗಿದ್ದು ದೈನಿಕ್ ಜಾಗರಣ ದಿನಪತ್ರಿಕೆಯ ಕ್ರೈಂ ವರದಿಗಾರನಾಗಿ ಕೆಲಸ ಮಾಡುತ್ತಿದ್ದ ಎಂದು ಪೋಲಿಸರು ತಿಳಿಸಿರುತ್ತಾರೆ.ಶುಕ್ರವಾರ ಮುಂಜಾನೆ 4.30 ಸಮಯದಲ್ಲಿ ರಾಣಿಗಂಜ್ನಲ್ಲಿರುವ ವಿಮಲ್ ಕುಮಾರ್ ಯಾದವ್ ಅವರ ಮನೆ ಬಾಗಿಲು ಬಡೆಯುವ ದುಷ್ಕರ್ಮಿಗಳು ಬಾಗಿಲು ತಗೆದ ವಿಮಲ್ ಕುಮಾರ್ ನ ಎದೆಗೆ ಗುಂಡು ಹಾರಿಸಿದ್ದಾರೆ. ಇದರಿಂದ ಕುಸಿದು ಬಿದ್ದ ವಿಮಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಮಲ್ ಅವರ ಸಹೋದರನನ್ನು ಈ ಹಿಂದೆಯೂ ಕೊಲೆ ಮಾಡಲಾಗಿದ್ದು, ಘಟನೆಗೆ ವಿಮಲ್ ಪ್ರತ್ಯಕ್ಷದರ್ಶಿಯಾಗಿದ್ದ ಎಂದು ಅರಾರಿಯಾ ಎಸ್ಪಿ ಅಶೋಕ್ ಕುಮಾರ್ ಸಿಂಗ್ ಹೇಳಿದ್ದಾರೆ. ಈ ಪ್ರಕರಣದ ಆರೋಪಿಗಳು ವಿಮಲ್ನನ್ನೂ ಹತ್ಯೆ ಮಾಡಿರಬಹುದು ಎಂದು ಶಂಕಿಸಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



