ನ್ಯೂಜ್ ಡೆಸ್ಕ್: ಬಿಹಾರ ರಾಜ್ಯದ ಅರಾರಿಯಾ ಜಿಲ್ಲೆಯಲ್ಲಿ ಒರ್ವ ಪತ್ರಕರ್ತನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮೃತ ಪತ್ರಕರ್ತನನ್ನು ವಿಮಲ್ ಕುಮಾರ್ ಯಾದವ್ (35) ಎಂದು ಗುರುತಿಸಲಾಗಿದ್ದು ದೈನಿಕ್ ಜಾಗರಣ ದಿನಪತ್ರಿಕೆಯ ಕ್ರೈಂ ವರದಿಗಾರನಾಗಿ ಕೆಲಸ ಮಾಡುತ್ತಿದ್ದ ಎಂದು ಪೋಲಿಸರು ತಿಳಿಸಿರುತ್ತಾರೆ.ಶುಕ್ರವಾರ ಮುಂಜಾನೆ 4.30 ಸಮಯದಲ್ಲಿ ರಾಣಿಗಂಜ್ನಲ್ಲಿರುವ ವಿಮಲ್ ಕುಮಾರ್ ಯಾದವ್ ಅವರ ಮನೆ ಬಾಗಿಲು ಬಡೆಯುವ ದುಷ್ಕರ್ಮಿಗಳು ಬಾಗಿಲು ತಗೆದ ವಿಮಲ್ ಕುಮಾರ್ ನ ಎದೆಗೆ ಗುಂಡು ಹಾರಿಸಿದ್ದಾರೆ. ಇದರಿಂದ ಕುಸಿದು ಬಿದ್ದ ವಿಮಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಮಲ್ ಅವರ ಸಹೋದರನನ್ನು ಈ ಹಿಂದೆಯೂ ಕೊಲೆ ಮಾಡಲಾಗಿದ್ದು, ಘಟನೆಗೆ ವಿಮಲ್ ಪ್ರತ್ಯಕ್ಷದರ್ಶಿಯಾಗಿದ್ದ ಎಂದು ಅರಾರಿಯಾ ಎಸ್ಪಿ ಅಶೋಕ್ ಕುಮಾರ್ ಸಿಂಗ್ ಹೇಳಿದ್ದಾರೆ. ಈ ಪ್ರಕರಣದ ಆರೋಪಿಗಳು ವಿಮಲ್ನನ್ನೂ ಹತ್ಯೆ ಮಾಡಿರಬಹುದು ಎಂದು ಶಂಕಿಸಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



