ಚಿಂತಾಮಣಿ:ಕರ್ನಾಟಕ ಪುರಸಭೆ ಕಾಯ್ದೆಯಂತೆ ಚಿಂತಾಮಣಿ ತಾಲ್ಲೂಕಿನ ಕೈವಾರ ಮತ್ತು ಮಸ್ತೇನಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಒಗ್ಗೂಡಿಸಿ ಮೇಲ್ದರ್ಜೆಗೇರಿಸಲಾಗಿದ್ದು ಮುಂದೆ ಅದನ್ನು ಕೈವಾರ ಪಟ್ಟಣ ಪಂಚಾಯತಿ ಪ್ರದೇಶ ಎಂದು ಸರ್ಕಾರ ಘೋಷಣೆ ಮಾಡಿದೆ.
ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಚಿಂತಾಮಣಿ ತಾಲ್ಲೂಕಿನ ಕೈವಾರ ತಾತಯ್ಯನವರ ಪವಿತ್ರ ಯಾತ್ರಾಸ್ಥಳವಾದ ಕೈವಾರ ಪಂಚಾಯಿತಿ ಮತ್ತು ಕೈಗಾರಿಕಾ ಪ್ರದೇಶ ಮಸ್ತೇನಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಕರ್ನಾಟಕ ಪೌರಸಭೆಗಳ ಕಾಯ್ದೆ 1964ರ ಕಲಂ-3, 4, 9, 349, 350, 351 ಮತ್ತು 355 ರನ್ವಯ ಶೆಡ್ಯೂಲ್-ಎ ರಲ್ಲಿ ಒಳಗೊಂಡ ಪ್ರದೇಶ ಹಾಗೂ ಶೆಡ್ಯೂಲ್-ಬಿ ರಲ್ಲಿ ಆ ಪ್ರದೇಶದ ಗಡಿರೇಖೆ ಗುರುತಿಸಲಾಗಿರುವಂತೆ ಮೇಲ್ದರ್ಜೆಗೆ ಏರಿಸಿ ಕೈವಾರ ಪಟ್ಟಣ ಪಂಚಾಯತಿ ಎಂದು ಘೋಷಿಸಲಾಗಿದೆ.
ಗ್ರಾಮಸ್ಥರ ಸಂಭ್ರಮಾಚರಣೆ
ಕೈವಾರ ಪಂಚಾಯಿತಿ ಮತ್ತು ಕೈಗಾರಿಕಾ ಪ್ರದೇಶ ಮಸ್ತೇನಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೆ ಏರಿಸಿ ಕೈವಾರ ಪಟ್ಟಣ ಪಂಚಾಯತಿ ಎಂದು ಘೋಷಣೆ ಮಾಡಿದ ಹಿನ್ನಲೆಯಲ್ಲಿ ಕೈವಾರ ಗ್ರಾಮಸ್ಥರು ಕಾಲಜ್ಞಾನಿ ಕೈವಾರ ತಾತಯ್ಯನವರ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



