ಚಿಂತಾಮಣಿ: ಕನ್ನಡ ಭಾಷೆ ಜೀವನದ ಭಾಷೆಯಾಗಬೇಕು ಇದಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಸದಾ ನೆರವಾಗುತ್ತದೆ ಗಡಿಭಾಗದ ಶಾಲೆಗಳಲ್ಲಿ ಕನ್ನಡ ಕಾರ್ಯಕ್ರಮಗಳನ್ನು ಆಯೋಜಿಸಿ ಮಕ್ಕಳಲ್ಲಿ ಮತ್ತು ಜನರಲ್ಲಿ ಕನ್ನಡ ಭಾಷೆಯ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಕಸಾಪ ಮಾಡುತ್ತಿದೆ ಎಂದು ಚಿಂತಾಮಣಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎನ್.ವಿ. ಶ್ರೀನಿವಾಸನ್ ಹೇಳಿದರು.
ಅವರು ಗಂಜಿಗುಂಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಚಿಂತಾಮಣಿ ಗೆಳೆಯರ ಬಳಗದ ವತಿಯಿಂದ ಪ್ರತಿ ವರ್ಷದಂತೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಭವಿಷ್ಯಕ್ಕೆ ನೆರವು ನೀಡುವ ನಿಟ್ಟಿನಲ್ಲಿ ನೋಟ್ ಪುಸ್ತಕ ಮತ್ತು ಲೇಖನ ಸಾಮಗ್ರಿಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿ ಮಾತನಾಡಿದರು.ಎಲ್ಲಾ ಭಾಷೆಗಳ ಬಗ್ಗೆ ಗೌರವ ಇರಲಿ ಆದರೆ ಬದುಕಿನ ಭಾಷೆ ಕನ್ನಡವನ್ನು ಪ್ರೀತಿಸಿ ಗೌರವಿಸಿ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಭಾರಿ ಮುಖ್ಯಶಿಕ್ಷಕಿ ವಿ.ವೆಂಕಟರತ್ನಮ್ಮ ಮಾತನಾಡಿ ಮಕ್ಕಳಲ್ಲಿನ ಪ್ರತಿಭೆಯನ್ನು ಹೊರತೆಗೆಯಲು ಇದು ಉತ್ತಮವಾದ ಕಾರ್ಯಕ್ರಮವಾಗಿದೆ. ಇಂತಹ ಕಾರ್ಯಕ್ರಮಗಳನ್ನು ಗಡಿಭಾಗದಲ್ಲಿ ಆಯೋಜನೆ ಮಾಡುತ್ತಿರುವ ಚಿಂತಾಮಣಿ ಗೆಳೆಯರ ಬಳಗದ ಎಲ್ಲರಿಗೂ ಅಭಿನಂದನೆಗಳನ್ನು ಹೇಳಿದರು.
ಮಾಧ್ಯಮ ಪ್ರತಿನಿಧಿ ನೂರುಲ್ಲಾ ಮಾತನಾಡಿ ವಿದ್ಯಾರ್ಥಿಗಳೇ ಕನ್ನಡ ಮಣ್ಣಿನಲ್ಲಿ ಹುಟ್ಟಿ ಬದುಕು ಕಟ್ಟಿಕೊಂಡಿರುವ ನಾವು ಕನ್ನಡ ಭಾಷೆ ಬಳಕೆಗೆ ಹೆಚ್ಚು ಮಹತ್ವ ನೀಡಬೇಕು ನಾವೆಲ್ಲರು ಕನ್ನಡಾಭಿಮಾನಿಗಳು ಕನ್ನಡವನ್ನು ಪ್ರೀತಿಸ ಬೆಳಸಲು ಸಹಕಾರಿಯಾಗಬೇಕು ಎಂದರು.
ಕಾರ್ಯಕ್ರಮಮದಲ್ಲಿ ಚಿಂತಾಮಣಿ ಗೆಳೆಯರ ಬಳಗದ ಗೋಲ್ಡ್ ಕೃಷ್ಣ,ಮಹೇಶ್,ನಾಗಾರ್ಜುನ,ಪೃಥ್ವಿರಾಜು,ಕಸಾಪ ಪದಾಧಿಕಾರಿಗಳಾದ ಬೀರೇಗೌಡ,ನಾಗರಾಜು,ನಿವೃತ್ತ ಶಿಕ್ಷಕರಾದ ಮುನಿಶಾಮಿರೆಡ್ಡಿ ಪ್ರೌಢಶಾಲೆಯ ಶಿಕ್ಷಕರಾದ ಷಮಾತಾಜ್,ಜಗದೀಶ್, ಜಯಣ್ಣ,ನೇತ್ರಾವತಿ,ಕಾವ್ಯ ಗಾಯತ್ರಿ ಮುಂತಾದವರಿದ್ದರು ಈ ಸಂದರ್ಭದಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಮತ್ತು ಶಿಕ್ಷಕ ವೃಂದವನ್ನು ಗೌರವಿಸಲಾಯಿತು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Saturday, April 26