ಚಿಂತಾಮಣಿ: ಕನ್ನಡ ಭಾಷೆ ಜೀವನದ ಭಾಷೆಯಾಗಬೇಕು ಇದಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಸದಾ ನೆರವಾಗುತ್ತದೆ ಗಡಿಭಾಗದ ಶಾಲೆಗಳಲ್ಲಿ ಕನ್ನಡ ಕಾರ್ಯಕ್ರಮಗಳನ್ನು ಆಯೋಜಿಸಿ ಮಕ್ಕಳಲ್ಲಿ ಮತ್ತು ಜನರಲ್ಲಿ ಕನ್ನಡ ಭಾಷೆಯ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಕಸಾಪ ಮಾಡುತ್ತಿದೆ ಎಂದು ಚಿಂತಾಮಣಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎನ್.ವಿ. ಶ್ರೀನಿವಾಸನ್ ಹೇಳಿದರು.
ಅವರು ಗಂಜಿಗುಂಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಚಿಂತಾಮಣಿ ಗೆಳೆಯರ ಬಳಗದ ವತಿಯಿಂದ ಪ್ರತಿ ವರ್ಷದಂತೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಭವಿಷ್ಯಕ್ಕೆ ನೆರವು ನೀಡುವ ನಿಟ್ಟಿನಲ್ಲಿ ನೋಟ್ ಪುಸ್ತಕ ಮತ್ತು ಲೇಖನ ಸಾಮಗ್ರಿಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿ ಮಾತನಾಡಿದರು.ಎಲ್ಲಾ ಭಾಷೆಗಳ ಬಗ್ಗೆ ಗೌರವ ಇರಲಿ ಆದರೆ ಬದುಕಿನ ಭಾಷೆ ಕನ್ನಡವನ್ನು ಪ್ರೀತಿಸಿ ಗೌರವಿಸಿ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಭಾರಿ ಮುಖ್ಯಶಿಕ್ಷಕಿ ವಿ.ವೆಂಕಟರತ್ನಮ್ಮ ಮಾತನಾಡಿ ಮಕ್ಕಳಲ್ಲಿನ ಪ್ರತಿಭೆಯನ್ನು ಹೊರತೆಗೆಯಲು ಇದು ಉತ್ತಮವಾದ ಕಾರ್ಯಕ್ರಮವಾಗಿದೆ. ಇಂತಹ ಕಾರ್ಯಕ್ರಮಗಳನ್ನು ಗಡಿಭಾಗದಲ್ಲಿ ಆಯೋಜನೆ ಮಾಡುತ್ತಿರುವ ಚಿಂತಾಮಣಿ ಗೆಳೆಯರ ಬಳಗದ ಎಲ್ಲರಿಗೂ ಅಭಿನಂದನೆಗಳನ್ನು ಹೇಳಿದರು.
ಮಾಧ್ಯಮ ಪ್ರತಿನಿಧಿ ನೂರುಲ್ಲಾ ಮಾತನಾಡಿ ವಿದ್ಯಾರ್ಥಿಗಳೇ ಕನ್ನಡ ಮಣ್ಣಿನಲ್ಲಿ ಹುಟ್ಟಿ ಬದುಕು ಕಟ್ಟಿಕೊಂಡಿರುವ ನಾವು ಕನ್ನಡ ಭಾಷೆ ಬಳಕೆಗೆ ಹೆಚ್ಚು ಮಹತ್ವ ನೀಡಬೇಕು ನಾವೆಲ್ಲರು ಕನ್ನಡಾಭಿಮಾನಿಗಳು ಕನ್ನಡವನ್ನು ಪ್ರೀತಿಸ ಬೆಳಸಲು ಸಹಕಾರಿಯಾಗಬೇಕು ಎಂದರು.
ಕಾರ್ಯಕ್ರಮಮದಲ್ಲಿ ಚಿಂತಾಮಣಿ ಗೆಳೆಯರ ಬಳಗದ ಗೋಲ್ಡ್ ಕೃಷ್ಣ,ಮಹೇಶ್,ನಾಗಾರ್ಜುನ,ಪೃಥ್ವಿರಾಜು,ಕಸಾಪ ಪದಾಧಿಕಾರಿಗಳಾದ ಬೀರೇಗೌಡ,ನಾಗರಾಜು,ನಿವೃತ್ತ ಶಿಕ್ಷಕರಾದ ಮುನಿಶಾಮಿರೆಡ್ಡಿ ಪ್ರೌಢಶಾಲೆಯ ಶಿಕ್ಷಕರಾದ ಷಮಾತಾಜ್,ಜಗದೀಶ್, ಜಯಣ್ಣ,ನೇತ್ರಾವತಿ,ಕಾವ್ಯ ಗಾಯತ್ರಿ ಮುಂತಾದವರಿದ್ದರು ಈ ಸಂದರ್ಭದಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಮತ್ತು ಶಿಕ್ಷಕ ವೃಂದವನ್ನು ಗೌರವಿಸಲಾಯಿತು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



